Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...