Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...