Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...