Homeದಲಿತ್ ಫೈಲ್ಸ್ಪ್ರತಿಭಟನೆ ಕಾರಣಕ್ಕೆ ಅಮಾನತುಗೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಪರಿಹಾರ; ಪಿಎಚ್‌ಡಿ ಮುಂದುವರಿಸಲು ಅವಕಾಶ

ಪ್ರತಿಭಟನೆ ಕಾರಣಕ್ಕೆ ಅಮಾನತುಗೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಪರಿಹಾರ; ಪಿಎಚ್‌ಡಿ ಮುಂದುವರಿಸಲು ಅವಕಾಶ

- Advertisement -
- Advertisement -

ದುಷ್ಕೃತ್ಯ ಹಾಗೂ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಈ ಹಿಂದೆ ಅಮಾನತುಗೊಂಡಿದ್ದ ದಲಿತ ಪಿಎಚ್‌ಡಿ ಸಂಶೋಧಕ ಮತ್ತು ಎಡಪಂಥೀಯ ವಿದ್ಯಾರ್ಥಿ ನಾಯಕ ರಾಮದಾಸ್ ಕೆ.ಎಸ್ ಅವರಿಗೆ ಸುಪ್ರೀಂ ಕೋರ್ಟ್ ಪರಿಹಾರ ನೀಡಿದ್ದು, ಪಿಎಚ್‌ಡಿ ಮುಂದುವರಿಸಲು ವಿದ್ಯಾರ್ಥಿಗೆ ಅವಕಾಶ ನೀಡುವಂತೆ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ಅಮಾನತು ಅಮಾನ್ಯಗೊಳಿಸಲಿಲ್ಲ. ಆದರೂ, ಈಗಾಗಲೇ ನಿನ್ನೆಯವರೆಗೆ ಅಅನುಭವಿಸಿದ ಮಾನತು ಇಂದಿಗೆ ಇಳಿಸಬೇಕೆಂದು ನಿರ್ದೇಶಿಸಿತು. ರಾಮದಾಸ್ ಅವರ ಪಿಎಚ್‌ಡಿ ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂಬ ಅಭಿಪ್ರಾಯವನ್ನು ಪೀಠ ವ್ಯಕ್ತಪಡಿಸಿತು.

ಏಪ್ರಿಲ್ 2024 ರಲ್ಲಿ ಟಿಐಎಸ್‌ಎಸ್ ರಾಮದಾಸ್ ಅವರನ್ನು ಸಂಸ್ಥೆಯಿಂದ ಎರಡು ವರ್ಷಗಳ ಕಾಲ ಅಮಾನತುಗೊಳಿಸಿತು. ಟಿಸ್‌ನ ಎಲ್ಲ ಕ್ಯಾಂಪಸ್‌ಗಳಲ್ಲಿ ಅವರ ಪ್ರವೇಶವನ್ನು ನಿಷೇಧಿಸಿತು. ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ರಾಮದಾಸ್ ಭಾಗವಹಿಸಿದ ನಂತರ, ಜನವರಿ 2024 ರಲ್ಲಿ ಟಿಐಎಸ್‌ಎಸ್- ಪಿಎಸ್‌ಎಫ್ (ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ) ಬ್ಯಾನರ್ ಅಡಿಯಲ್ಲಿ ‘ಸಂಸತ್ತಿನ ಮೆರವಣಿಗೆ’ ಎಂಬ ಪ್ರದರ್ಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ವಿರೋಧಿಸಿದ ನಂತರ ಈ ಕ್ರಮ ಕೈಗೊಳ್ಳಲಾಯಿತು.

ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್‌ ರಾಮ್‌ದಾಸ್‌ರವರ ಅಮಾನತು ಎತ್ತಿಹಿಡಿದಿದೆ. ಈ ಪ್ರತಿಭಟನೆ/ಮೆರವಣಿಗೆ ರಾಜಕೀಯ ಪ್ರೇರಿತವಾಗಿದೆ ಎಂದು ಹೈಕೋರ್ಟ್ ಗಮನಿಸಿತು. ಮೆರವಣಿಗೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಸಂಸ್ಥೆಯ ಅಭಿಪ್ರಾಯಗಳನ್ನು ಪ್ರತಿನಿಧಿಸುತ್ತವೆ ಮತ್ತು ಇದು ಸಂಸ್ಥೆಗೆ ಅಪಖ್ಯಾತಿ ತರುತ್ತದೆ ಎಂಬ ಅಭಿಪ್ರಾಯವನ್ನು ರಾಮದಾಸ್ ಸೃಷ್ಟಿಸಿದ್ದಾರೆ ಎಂದು ಟಿಐಎಸ್‌ಎಸ್‌ ಕಂಡುಕೊಂಡಿದ್ದು ಸರಿಯಾಗಿದೆ ಎಂದು ಗಮನಿಸಿತು.

2015 ರಲ್ಲಿ ರಾಮದಾಸ್ ಮೊದಲು ಮಾಧ್ಯಮ ಮತ್ತು ಸಾಂಸ್ಕೃತಿಕ ಅಧ್ಯಯನ ಕೋರ್ಸ್‌ನಲ್ಲಿ ಸ್ನಾತಕೋತ್ತರ ಪದವಿಗಾಗಿ ಟಿಐಎಸ್‌ಎಸ್‌ಗೆ ಸೇರಿಕೊಂಡರು. ಅವರಿಗೆ ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಲಾಯಿತು. 2018 ರಲ್ಲಿ, ಅವರು ಅಭಿವೃದ್ಧಿ ಅಧ್ಯಯನದಲ್ಲಿ ಸಂಯೋಜಿತ ಎಂಪಿಲ್. ಮತ್ತು ಪಿಎಚ್‌ಡಿ ಕೋರ್ಸ್‌ಗೆ ಸೇರಿಕೊಂಡರು. 2023 ರಲ್ಲಿ, ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅವರ ಸಾಧನೆಯನ್ನು ಪರಿಗಣಿಸಿ, ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯವು ಅವರಿಗೆ ಪರಿಶಿಷ್ಟ ಜಾತಿಯಲ್ಲಿ ರಾಷ್ಟ್ರೀಯ ಫೆಲೋಶಿಪ್ ನೀಡಿತು.

ಜಾಮೀನು ಪಡೆದ ಆರೋಪಿಗೆ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ: ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...