Homeಮುಖಪುಟವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

ವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯಿಂದ 2017ರಲ್ಲಿ ವಿದೇಶಿ ಘೋಷಿಸಲ್ಪಟ್ಟ ಮಹಿಳೆಯ ಗಡಿಪಾರು ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಜೂನ್‌.24) ತಾತ್ಕಾಲಿಕವಾಗಿ ತಡೆಹಿಡಿದಿದೆ.

ನ್ಯಾಯಮಂಡಳಿಯ ಆದೇಶವನ್ನು ಪ್ರಶ್ನಿಸಿ ಜೈನಾಬ್ ಬೀಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಫೆಬ್ರವರಿ 17ರಂದು ಗುವಾಹಟಿ ಹೈಕೋರ್ಟ್ ವಜಾಗೊಳಿಸಿತ್ತು. ಮಹಿಳೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮಂಗಳವಾರ, ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರ ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಬೀಬಿ ಸಲ್ಲಿಸಿದ ಅರ್ಜಿಯ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 25 ರಂದು ನಡೆಯಲಿದೆ.

ತಾನು ಭಾರತೀಯ ಪ್ರಜೆಯಾಗಿದ್ದು, ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿದ್ದೇನೆ ಎಂದು ಬೀಬಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಬೀಬಿ ಅವರು 1951ರ ರಾಷ್ಟ್ರೀಯ ನಾಗರಿಕರ ನೋಂದಣಿ ಪಟ್ಟಿ ಮತ್ತು 1965 ಮತ್ತು 1970ರ ಮತದಾರರ ಪಟ್ಟಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಅವುಗಳಲ್ಲಿ ಅವರ ಅಜ್ಜನ ಹೆಸರಿದೆ. ಅಲ್ಲದೆ, 1989 ಮತ್ತು 1997ರ ನಂತರದ ಮತದಾರರ ಪಟ್ಟಿಗಳಲ್ಲಿ ಅವರ ಹೆತ್ತವರ ಹೆಸರುಗಳಿದ್ದರೆ, 2016 ಮತ್ತು 2018ರ ಮತದಾರರ ಪಟ್ಟಿಗಳಲ್ಲಿ ಅವರ ಗಂಡನ ಹೆಸರಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಮಂಡಳಿಯು ಈ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ. ತನ್ನನ್ನು “ನಿರಂಕುಶ ಮತ್ತು ಯಾಂತ್ರಿಕ ರೀತಿಯಲ್ಲಿ” ವಿದೇಶಿ ಎಂದು ಘೋಷಿಸಿದೆ ಎಂಬುವುದಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಬೀಬಿ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಅವುಗಳ ಮೇಲೆ ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಯ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎಂದು ಹೇಳಲಾಗ್ತಿದೆ.

ಇಂತಹ ನ್ಯಾಯಮಂಡಳಿ ವಿದೇಶಿಯರು ಎಂದು ಘೋಷಿಸಿದವರನ್ನು ಅಸ್ಸಾಂ ಸರ್ಕಾರ ಗಡಿಪಾರು ಮಾಡುತ್ತಿದೆ. ಸರ್ಕಾರ ಮೇ ತಿಂಗಳಿನಿಂದ 300ಕ್ಕೂ ಹೆಚ್ಚು ಜನರನ್ನು ಗಡಿಯಾಚೆ ಬಾಂಗ್ಲಾದೇಶಕ್ಕೆ ಬಲವಂತವಾಗಿ ತಳ್ಳಿದೆ. ಅವರಲ್ಲಿ ಹಲವರು ತಾವು ಭಾರತೀಯ ನಾಗರಿಕರು ಎಂದು ವರದಿಗಳು ಹೇಳಿವೆ.

“ಅಸ್ಸಾಂನ ‘ಹಿತಾಸಕ್ತಿಗಳನ್ನು ಕಾಪಾಡುವುದು’ ಮತ್ತು ‘ಎಲ್ಲಾ ಅಕ್ರಮ ವಲಸಿಗರನ್ನು ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ರಾಜ್ಯದಿಂದ ಹೊರಹಾಕುವುದು ಸರ್ಕಾರದ ಕೆಲಸ” ಎಂದು ಮೇ 20ರಂದು, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ವಿದೇಶಿ ಪ್ರಜೆಗಳೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಸರ್ಕಾರ ಗಡಿಪಾರು ಮಾಡಬೇಕು ಎಂಬ ಫೆಬ್ರವರಿ 4ರ ಸುಪ್ರೀಂಕೋರ್ಟ್ ತೀರ್ಪನ್ನು ಸಿಎಂ ಶರ್ಮಾ ಉಲ್ಲೇಖಿಸಿದ್ದಾರೆ.

ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....