Homeಮುಖಪುಟವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

ವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯಿಂದ 2017ರಲ್ಲಿ ವಿದೇಶಿ ಘೋಷಿಸಲ್ಪಟ್ಟ ಮಹಿಳೆಯ ಗಡಿಪಾರು ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಜೂನ್‌.24) ತಾತ್ಕಾಲಿಕವಾಗಿ ತಡೆಹಿಡಿದಿದೆ.

ನ್ಯಾಯಮಂಡಳಿಯ ಆದೇಶವನ್ನು ಪ್ರಶ್ನಿಸಿ ಜೈನಾಬ್ ಬೀಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಫೆಬ್ರವರಿ 17ರಂದು ಗುವಾಹಟಿ ಹೈಕೋರ್ಟ್ ವಜಾಗೊಳಿಸಿತ್ತು. ಮಹಿಳೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮಂಗಳವಾರ, ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರ ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಬೀಬಿ ಸಲ್ಲಿಸಿದ ಅರ್ಜಿಯ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 25 ರಂದು ನಡೆಯಲಿದೆ.

ತಾನು ಭಾರತೀಯ ಪ್ರಜೆಯಾಗಿದ್ದು, ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿದ್ದೇನೆ ಎಂದು ಬೀಬಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಬೀಬಿ ಅವರು 1951ರ ರಾಷ್ಟ್ರೀಯ ನಾಗರಿಕರ ನೋಂದಣಿ ಪಟ್ಟಿ ಮತ್ತು 1965 ಮತ್ತು 1970ರ ಮತದಾರರ ಪಟ್ಟಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಅವುಗಳಲ್ಲಿ ಅವರ ಅಜ್ಜನ ಹೆಸರಿದೆ. ಅಲ್ಲದೆ, 1989 ಮತ್ತು 1997ರ ನಂತರದ ಮತದಾರರ ಪಟ್ಟಿಗಳಲ್ಲಿ ಅವರ ಹೆತ್ತವರ ಹೆಸರುಗಳಿದ್ದರೆ, 2016 ಮತ್ತು 2018ರ ಮತದಾರರ ಪಟ್ಟಿಗಳಲ್ಲಿ ಅವರ ಗಂಡನ ಹೆಸರಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಮಂಡಳಿಯು ಈ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ. ತನ್ನನ್ನು “ನಿರಂಕುಶ ಮತ್ತು ಯಾಂತ್ರಿಕ ರೀತಿಯಲ್ಲಿ” ವಿದೇಶಿ ಎಂದು ಘೋಷಿಸಿದೆ ಎಂಬುವುದಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಬೀಬಿ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಅವುಗಳ ಮೇಲೆ ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಯ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎಂದು ಹೇಳಲಾಗ್ತಿದೆ.

ಇಂತಹ ನ್ಯಾಯಮಂಡಳಿ ವಿದೇಶಿಯರು ಎಂದು ಘೋಷಿಸಿದವರನ್ನು ಅಸ್ಸಾಂ ಸರ್ಕಾರ ಗಡಿಪಾರು ಮಾಡುತ್ತಿದೆ. ಸರ್ಕಾರ ಮೇ ತಿಂಗಳಿನಿಂದ 300ಕ್ಕೂ ಹೆಚ್ಚು ಜನರನ್ನು ಗಡಿಯಾಚೆ ಬಾಂಗ್ಲಾದೇಶಕ್ಕೆ ಬಲವಂತವಾಗಿ ತಳ್ಳಿದೆ. ಅವರಲ್ಲಿ ಹಲವರು ತಾವು ಭಾರತೀಯ ನಾಗರಿಕರು ಎಂದು ವರದಿಗಳು ಹೇಳಿವೆ.

“ಅಸ್ಸಾಂನ ‘ಹಿತಾಸಕ್ತಿಗಳನ್ನು ಕಾಪಾಡುವುದು’ ಮತ್ತು ‘ಎಲ್ಲಾ ಅಕ್ರಮ ವಲಸಿಗರನ್ನು ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ರಾಜ್ಯದಿಂದ ಹೊರಹಾಕುವುದು ಸರ್ಕಾರದ ಕೆಲಸ” ಎಂದು ಮೇ 20ರಂದು, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ವಿದೇಶಿ ಪ್ರಜೆಗಳೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಸರ್ಕಾರ ಗಡಿಪಾರು ಮಾಡಬೇಕು ಎಂಬ ಫೆಬ್ರವರಿ 4ರ ಸುಪ್ರೀಂಕೋರ್ಟ್ ತೀರ್ಪನ್ನು ಸಿಎಂ ಶರ್ಮಾ ಉಲ್ಲೇಖಿಸಿದ್ದಾರೆ.

ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...