Homeಕರ್ನಾಟಕರಾಜ್ಯಪಾಲರ ವಿಚಾರದಲ್ಲಿ ಕೇಂದ್ರಕ್ಕೆ ಪರೋಕ್ಷ ಎಚ್ಚರಿಕೆ ಕೊಟ್ಟ ಸುಪ್ರೀಂ: ದಿನೇಶ್ ಗುಂಡೂರಾವ್

ರಾಜ್ಯಪಾಲರ ವಿಚಾರದಲ್ಲಿ ಕೇಂದ್ರಕ್ಕೆ ಪರೋಕ್ಷ ಎಚ್ಚರಿಕೆ ಕೊಟ್ಟ ಸುಪ್ರೀಂ: ದಿನೇಶ್ ಗುಂಡೂರಾವ್

- Advertisement -
- Advertisement -

ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ”ಪಂಜಾಬ್ ರಾಜ್ಯಪಾಲರ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಅತ್ಯಂತ ಕಟುವಾದ ಭಾಷೆಯಲ್ಲಿ ಎಚ್ಚರಿಕೆ ನೀಡಿದೆ. ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆಯೂ ಹೌದು” ಎಂದಿದ್ದಾರೆ.

”ರಾಷ್ಟ್ರಪತಿಗಳ ಮೂಲಕ ರಾಜ್ಯಗಳಿಗೆ ನೇಮಕವಾಗುವ ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಬೇಕು. ವಿಪರ್ಯಾಸವೆಂದರೆ‌ ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ‌ ನಿಯುಕ್ತರಾಗಿರುವ ಕೆಲವು ರಾಜ್ಯಪಾಲರು ಬಿಜೆಪಿಯ ಏಜೆಂಟ್‌ಗಳಾಗಿದ್ದಾರೆ. ಅಧಿವೇಶನದಲ್ಲಿ ಅಂಗೀಕಾರವಾದ ಮಸೂದೆಗಳನ್ನು‌ ಅನಗತ್ಯವಾಗಿ ತಡೆ ಹಿಡಿಯುವುದು, ಬಿಕ್ಕಟ್ಟು ಸೃಷ್ಟಿಸುವುದು ಕೆಲ ರಾಜ್ಯಪಾಲರ ಕಾರ್ಯವಿಧಾನವಾಗಿದೆ. ಇದು ಸಂವಿಧಾನಕ್ಕೆ ಎಸಗುವ ಅಪಚಾರ” ಎಂದು ಕಿಡಿಕಾರಿದ್ದಾರೆ.

”ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ‌ ಗಂಭೀರವಾದ ವಿಚಾರ. ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂನ‌ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ವಿಷಯದಲ್ಲಿ ನಮ್ಮ ಕರ್ನಾಟಕದ ರಾಜ್ಯಪಾಲರಾದ ಗೆಹ್ಲೋಟ್ ಅವರು ನಿಶ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಸರಳ ಸಜ್ಜನಿಕೆ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...