Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ನಿಷೇಧದ ವಿರುದ್ಧ ಸುಪ್ರೀಂ ವಿಚಾರಣೆ; ಸಮಯ ವ್ಯರ್ಥ ಎಂದ ಕೇಂದ್ರ ಕಾನೂನು ಸಚಿವ

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧದ ವಿರುದ್ಧ ಸುಪ್ರೀಂ ವಿಚಾರಣೆ; ಸಮಯ ವ್ಯರ್ಥ ಎಂದ ಕೇಂದ್ರ ಕಾನೂನು ಸಚಿವ

- Advertisement -
- Advertisement -

2002ರ ಗುಜರಾತ್ ಹತ್ಯಾಕಾಂಡದ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿಷೇಧ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು, ಇದು “ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯ ವ್ಯರ್ಥ” ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ಸಾಕ್ಷ್ಯಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ತುರ್ತು ಅಧಿಕಾರವನ್ನು ಬಳಸಿ ತಡೆಹಿಡಿದಿತ್ತು. ಒಕ್ಕೂಟ ಸರ್ಕಾರ ಬಳಸಿದ ಈ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ಸೋಮವಾರ ನಡೆಸಲಿದೆ.

ಪ್ರಕರಣವನ್ನು ತುರ್ತು ಪಟ್ಟಿ ಮಾಡಬೇಕು ಎಂದು ಕೋರಿ ವಕೀಲ ಎಂ.ಎಲ್. ಶರ್ಮಾ ಮತ್ತು ಹಿರಿಯ ವಕೀಲ ಸಿ.ಯು. ಸಿಂಗ್ ಸಲ್ಲಿಸಿದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಗಮನಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಬ್ಯಾನ್‌‌ ವಿರುದ್ಧದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್

ಎಂಎಲ್‌ ಶರ್ಮಾ ಅವರ ಜೊತೆಗೆ, ಹಿರಿಯ ಪತ್ರಕರ್ತ ಎನ್.ರಾಮ್, ಹೋರಾಟಗರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮದಿಂದ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಒಕ್ಕೂಟ ಸರ್ಕಾರವು ಐಟಿ ನಿಯಮಗಳ ಅಡಿಯ ತುರ್ತು ಅಧಿಕಾರವನ್ನು ಬಳಸಿಕೊಂಡಿದೆ ಎಂದು ವಕೀಲ ಸಿ.ಯು. ಸಿಂಗ್ ಹೇಳಿದ್ದಾರೆ. “ಎನ್. ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಒಕ್ಕೂಟ ಸರ್ಕಾರವು ನಿರ್ಬಂಧದ ಆದೇಶವನ್ನು ಇನ್ನೂ ಔಪಚಾರಿಕವಾಗಿ ಪ್ರಕಟಿಸಿಲ್ಲ. ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಅಜ್ಮೀರ್‌ನ ಕಾಲೇಜು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ಎರಡು ಭಾಗಗಳಾಗಿ ಬಿಡುಗಡೆಗೊಂಡ ಬಿಬಿಸಿ ಸಾಕ್ಷ್ಯಚಿತ್ರದ ಮೇಲಿನ ಒಕ್ಕೂಟ ಸರ್ಕಾರದ ನಿಷೇಧವು, ‘ದುಷ್ಕೃತ್ಯ, ಅನಿಯಂತ್ರಿತ ಮತ್ತು ಅಸಂವಿಧಾನಿಕ’ವಾಗಿದೆ” ಎಂದು ಎಮ್‌.ಎಲ್. ಶರ್ಮಾ ಅವರ ಅರ್ಜಿಯು ಉಲ್ಲೇಖಿಸಿದೆ.

ಸಾಕ್ಷ್ಯಚಿತ್ರವನ್ನು ಸಂಶೋಧನೆ ಮಾಡಿಯೇ ಸಿದ್ಧಗೊಳಿಸಲಾಗಿದೆ ಎಂದು ಬಿಬಿಸಿ ಹೇಳುತ್ತದೆ. ಸರ್ಕಾರ ಬ್ಯಾನ್ ಮಾಡಿರುವುದನ್ನು ವಿರೋಧಿಸಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ತಿಳಿಸಿದ್ದಾರೆ.

ಎಂಎಲ್ ಶರ್ಮಾ ಎಂಬ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯೊಂದರಲ್ಲಿ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ. ಸಾಕ್ಷ್ಯಚಿತ್ರಕ್ಕೆ ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದುಹಾಕುವ ಆದೇಶದ ಕುರಿತು ವಕೀಲ ಪ್ರಶಾಂತ್ ಭೂಷಣ್, ಪತ್ರಕರ್ತ ಎನ್ ರಾಮ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ ಪ್ರತ್ಯೇಕ ಅರ್ಜಿಯನ್ನು ಈ ವಾರದ ಕೊನೆಯಲ್ಲಿ ತೆಗೆದುಕೊಳ್ಳಲಾಗುತ್ತದೆ.

ಭಾರತದಾದ್ಯಂತ ವಿದ್ಯಾರ್ಥಿಗಳ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಸಾಕ್ಷ್ಯಚಿತ್ರ ನಿಷೇಧವನ್ನು ಪ್ರತಿಭಟಿಸಿ, ಸಾರ್ವಜನಿಕ ಪ್ರದರ್ಶನಗಳನ್ನು ಆಯೋಜಿಸಿವೆ. ಅನೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಇನ್ನೂ ಕೆಲವೆಡೆ  ಕೆಲವರ ಬಂಧನ ಕೂಡ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....