Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...