Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...