Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...