Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...