Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...