Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...