Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರ ಸರ್ಕಾರ ರಚನೆ ವಿವಾದ: ನಾಳೆಗೆ ತೀರ್ಪು ಮುಂದೂಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಮಹಾರಾಷ್ಟ್ರ ವಿಚಾರದ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಧೀರ್ಘ ವಿಚಾರಣೆ ನಡೆದು ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ರಮಣ ನೇತೃತ್ವದ ನ್ಯಾಯಪೀಠವು ತನ್ನ ತೀರ್ಪನ್ನು ನಾಳೆಗೆ ಮುಂದೂಡಿದೆ.

ಮೊದಲಿಗೆ ಸರ್ಕಾರದ ಪರ ಜನರಲ್‌ ಸಾಲಿಸಿಟರ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ನಡೆ ಮತ್ತು ಪ್ರಮಾಣ ವಚನ ನಡೆದಿದ್ದನ್ನು ಸಮರ್ಥಿಸಿಕೊಂಡರು.

ರಾಜ್ಯಪಾಲರಿಗೆ ಕೊಟ್ಟಿರುವ ಎನ್‌ಸಿಪಿ 54 ಶಾಸಕರ ಬೆಂಬಲ ಪತ್ರ ಸರಿಯಾಗಿದೆ ಎಂದು ಅಜಿತ್‌ ಪವಾರ್‌ ಪರ ವಕೀಲ ಮಣಿಂದರ್‌ ಸಿಂಗ್‌ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಒಂದಷ್ಟು ಸಮಸ್ಯೆಯಿದ್ದು ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರೂ ಕೂಡ ಪ್ರಶ್ನಿಸಿಲ್ಲ. ಅಜಿತ್‌ ಪವಾರ್‌ರವರೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಶಾಸಕರ ಪಟ್ಟಿ ಸಾಂವಿಧಾನಿಕವಾಗಿದ್ದು ಅದು ಕಾನೂನಾತ್ಮಕವಾಗಿಯೂ ಸರಿಯಾಗಿದೆ ಎಂದು ವಾದ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ರವರು ಸುಪ್ರೀಂ ಕೋರ್ಟಿಗೆ ಅಫಿಡವಿಟ್‌ ಸಲ್ಲಿಸಿದ್ದು ಬಹುಮತ ಸಾಬೀತುಪಡಿಸಲು ಹೆಚ್ಚು ಸಮಯ ಕೋರಿದ್ದಾರೆ.

ಕಾಂಗ್ರೆಸ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಿ ನವೆಂಬರ್‌ 22ರ ಶುಕ್ರವಾರ ಸಂಜೆ ಸುದ್ದಿಗೋಷ್ಟಿ ನಡೆಸಲಾಗಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಮೂರು ಪಕ್ಷಗಳು ಸರ್ಕಾರ ರಚಿಸುವುದಾಗಿ ಘೋಷಿಸಿದ್ದವು. ರಾಜ್ಯಪಾಲರ ಭೇಟಿಗೂ ಸಿದ್ಧತೆ ನಡೆಸಿದ್ದಾರೆ. ಆದರೆ ಬೆಳಿಗ್ಗೆ ನೋಡಿದರೆ ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಯಾಗಿಬಿಟ್ಟಿದೆ.

ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿತ್ತೇ? ಆತುರಾತುರವಾಗಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವ ತುರ್ತು ಏನಿತ್ತು?  ಎಂದು  ಪ್ರಶ್ನಿಸಿದ್ದಾರೆ.

ಕುದುರೆ ರೇಸ್‌ನಲ್ಲಿ ಜಾಕಿ ಓಡಿ ಹೋಗಬಹುದು. ಆದರೆ ಕುದುರೆಗಳು ಇನ್ನು ನಮ್ಮ ಬಳಿಯೇ ಇವೆ ಎಂದು ಕಪಿಲ್‌ ಸಿಬಲ್‌ ವ್ಯಾಖ್ಯಾನಿಸಿದ್ದಾರೆ. ನಾವು ನವೆಂಬರ್‌ 23 ರಂದು ಸರ್ಕಾರ ರಚಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಸೇರಿ ನಮ್ಮ ಬಳಿ 154 ಶಾಸಕರ ಬೆಂಬಲ ನಮಗಿದೆ. 24 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಕೋರ್ಟ್‌ ಆದೇಶ ನೀಡಬೇಕು ಎಂದಿದ್ದಾರೆ.

ಎರಡೂ ಕಡೆಯವರು ಬಹುಮತ ಇದೆ ಎನ್ನುತ್ತಿದೆಯಾದರೆ ವಿಶ್ವಾಸಮತಯಾಚನೆ ಆಗಲಿ ಬಿಡಿ. ತಡ ಯಾಕೆ ಎಂದು ಅಭಿಷೇಕ್‌ ಮನುಸಿಂಘ್ವಿ ಪ್ರಶ್ನಿಸಿದ್ದರೆ. ಒಂದು ತಿಂಗಳು ಕಾದ ರಾಜ್ಯಪಾಲರು ಒಂದು ದಿನ ಕಾಯಲಿಲ್ಲ ಏಕೆ? ಎಂದು ಕೂಡ ಪ್ರಶ್ನಿಸಿದ್ದಾರೆ.

ಎನ್‌ಸಿಪಿ ಶಾಸಕರ ಸಹಿ ಸಂಗ್ರಹಿಸಿದ್ದು ಬೇರೆ ವಿಚಾರಕ್ಕೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಜಿತ್‌ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ನಾಯಕತ್ವದಿಂದ ತೆಗೆಯಲಾಗಿದೆ.

ಬಿಜೆಪಿ ಅರ್ಧ ಸತ್ಯ ಹೇಳಿದೆ, ಪ್ರಜಾಪ್ರಭುತ್ವ ಮೇಲೆ ವಂಚನೆ ನಡೆದಿದೆ ಎಂದು ಅಭಿಷೇಕ್‌ ಮನುಸಿಂಗ್ವಿ ಆರೋಪಿಸಿದ್ದಾರೆ. ಎನ್‌ಸಿಪಿಯ ಒಬ್ಬನೇ ಶಾಸಕ ಬಿಜೆಪಿಗೆ ಬೆಂಬಲ ನೀಡಿಲ್ಲ. ಹಾಗಾಗಿ ಕೂಡಲೇ ಬಹುಮತ ಸಾಬೀತಿಗೆ ಆದೇಶ ನೀಡಬೇಕು ಎಂದಿದ್ದಾರೆ.

ಇದೇ ಸಮಯದಲ್ಲಿ ಅಭಿಷೇಕ್‌ ಮನುಸಿಂಘ್ವಿಯವರು ಎನ್‌ಸಿಪಿ ಕಾಂಗ್ರೆಸ್‌ ಬೆಂಬಲವಿರುವ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌‌ಗೆ ಸಲ್ಲಿಸಲು ಮುಂದಾಗಿದ್ದಾರೆ. ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ಅದನ್ನು ತಿರಸ್ಕರಿಸಿದೆ.

ಆನಂತರ ಅವರು ಬಹುಮತ ಸಾಬೀತಿಗೆ ಆದೇಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಬಹುಮತ ಸಾಬೀತು ಪಡಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹಿಂದಿನ ಪ್ರಕರಣಗಳಲ್ಲಿ ಕೂಡ 24 ಗಂಟೆ ಅಥವಾ 48 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದೆ ಎಂದು ಅವರು ವಾದಿಸಿದ್ದಾರೆ.

ಮೂರು ನ್ಯಾಯಮೂರ್ತಿಗಳ ಪೀಠವು ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...