Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು....

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...