Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...