Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...