Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...