Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...