Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...