Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...

ಇಂಡಿಗೋ ಏರ್ ಲೈನ್ಸ್, ಮುಗಿಯದ ಸಂಕಷ್ಟ: ಬೆಂಗಳೂರಿನಲ್ಲಿ 73 ವಿಮಾನ, ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದ್ದರಿಂದ ಡಿಸೆಂಬರ್ 3ರಿಂದ, ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ...