Homeಮುಖಪುಟವಿಶೇಷ ಚೇತನರ 'ಅಪಹಾಸ್ಯ': ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

ವಿಶೇಷ ಚೇತನರ ‘ಅಪಹಾಸ್ಯ’: ಸಮಯ್ ರೈನಾ ಸೇರಿದಂತೆ ಐವರಿಗೆ ಕ್ಷಮೆಯಾಚಿಸಲು ಸೂಚಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ಚೇತನರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಸಮಯ್ ರೈನಾ ಸೇರಿದಂತೆ ಐವರು ಹಾಸ್ಯ ಕಲಾವಿದರಿಗೆ ತಮ್ಮ ಯೂಟ್ಯೂಬ್ ಚಾನೆಲ್‌ಗಳಲ್ಲಿ ಮತ್ತು ಇತರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಬೇಷರತ್ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಆ.25) ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರ ಹಾಸ್ಯಗಳ ವಿರುದ್ದ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದೆ. ವಿಶೇಷ ಚೇತನರ ಅವಹೇಳನ ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಈ ಐವರು ವಿಶೇಷ ಚೇತನರು, ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಿದ ಆರೋಪ ಹೊರಿಸಲಾಗಿದೆ.

ಮುಂದಿನ ವಿಚಾರಣೆಯ ದಿನದಂದು ಹಾಸ್ಯ ಕಲಾವಿದರು ಪಾವತಿಸಬೇಕಾದ ದಂಡವನ್ನು ನಿರ್ಧರಿಸುವುದಾಗಿ ಪೀಠ ಹೇಳಿದೆ. “ಪಶ್ಚಾತ್ತಾಪದ ಪ್ರಮಾಣವು ಅಪರಾಧದ ಮಟ್ಟಕ್ಕಿಂತ ಹೆಚ್ಚಾಗಿರಬೇಕು, ಅದು ತಪ್ಪನ್ನು ತೊಳೆದಂತೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದಾರೆ.

ತನ್ನ ಕಾರ್ಯಕ್ರಮದಲ್ಲಿ ಬೇಷರತ್ತಾದ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲಾಗುವುದು ಎಂಬ ಪ್ರತಿಜ್ಞೆಗೆ ಒಳಪಟ್ಟು ದೈಹಿಕ ಹಾಜರಾತಿಯಿಂದ ವಿನಾಯಿತಿ ಪಡೆದ ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಹೊರತುಪಡಿಸಿ, ಉಳಿದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಹಾಸ್ಯಕ್ಕೆ ಸರ್ಕಾರ ಮಾರ್ಗಸೂಚಿ ರೂಪಿಸುವ ಬಗ್ಗೆ ನ್ಯಾಯಾಲಯಕ್ಕೆ ಹೇಳಿಕೆ ಕೊಟ್ಟಿದ್ದು, ಆದರೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದಿದ್ದಾರೆ.

“ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಿದೆ’ ಮತ್ತು ಹಾಸ್ಯ ಕಲಾವಿದರು ಕ್ಷಮೆಯಾಚಿಸಲಿದ್ದಾರೆ ಎಂದು ಹಿರಿಯ ವಕೀಲೆ ಅಪರತಿಜಾ ಸಿಂಗ್ ಪೀಠಕ್ಕೆ ತಿಳಿಸಿದ್ದಾರೆ. ಹಾಸ್ಯವು ಬೇರೆಯವರ ಗೌರವಕ್ಕೆ ಧಕ್ಕೆ ತರಬಾರದು ಎಂದು ಪೀಠ ಹೇಳಿದೆ.

ಐಟಿ ಕಾಯ್ದೆಯಡಿಯಲ್ಲಿ ಆರೋಪಿಗಳಿಗೆ ದಂಡ ವಿಧಿಸಲಾಗುವುದು ಎಂದು ನ್ಯಾಯಮೂರ್ತಿ ಕಾಂತ್ ಹೇಳಿದ್ದು, ಕಲಾವಿದರು ತಪ್ಪ ತಪ್ಪುಗಳನ್ನು ತಿದ್ದಿಕೊಂಡು ಮುಂದೆ ವಿಶೇಷ ಚೇತನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ವೇದಿಕೆಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

ಇಂಡಿಯಾಸ್ ಗಾಟ್ ಲೇಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಯೂಟ್ಯೂಬರ್‌ಗಳಾದ ರಣವೀರ್ ಅಲಹಾಬಾದಿಯಾ ಮತ್ತು ಆಶಿಶ್ ಚಂಚ್ಲಾನಿ ಸಲ್ಲಿಸಿದ ಎರಡು ಅರ್ಜಿಗಳು ಮತ್ತು ಹಾಸ್ಯ ಕಲಾವಿದರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮಜೀತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಅಲಿಯಾಸ್ ಸೋನಾಲಿ ಆದಿತ್ಯ ದೇಸಾಯಿ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ವಿಶೇಷ ಚೇತನರ ವಿರುದ್ದ ಅಸಂವೇದನಾಶೀಲ ಹಾಸ್ಯ ಮಾಡರುವುದಾಗಿ ಆರೋಪಿಸಿ M/s ಕ್ಯೂರ್ ಫೌಂಡೇಶನ್ ಸಲ್ಲಿಸಿದ ಒಂದು ಅರ್ಜಿ ಸೇರಿದಂತೆ ಪೀಠವು 3 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.

ದೇಶದೆಲ್ಲೆಡೆ ಸದ್ದು ಮಾಡಿದ ನೋಯ್ಡಾ ವರದಕ್ಷಿಣೆ ದುರಂತ: ಜೀವಂತ ಸುಟ್ಟು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...