Homeಮುಖಪುಟರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ - ಓಮರ್...

ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ' ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು.

- Advertisement -
- Advertisement -

ಕೃಷಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ ಹೋರಾಡುತ್ತಿರುವ ರೈತರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಿದೆ. ಇದು ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ

“ನನ್ನ ಪ್ರಶ್ನೆಯ ಮೂಲದಲ್ಲಿ ಸುಪ್ರೀಂಕೋರ್ಟ್ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಇಲ್ಲವೇ ಇಲ್ಲ. ರೈತ ಪ್ರತಿಭಟನೆಯೊಂದಿಗೆ ಏನು ನಡೆಯುತ್ತಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಅರಿತುಕೊಂಡು, ಈ ಅಮೋಘ ಹೋರಾಟದ ವಿಷಯಗಳಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ನೋಡಿದ್ದೇವೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಆಯೋಜಿಸಿದ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ 370 ಮತ್ತು 35ಎ ವಿಧಿಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ನೂರಾರು ಅರ್ಜಿಗಳನ್ನು ಆಲಿಸಲು ಮತ್ತು ತೀರ್ಮಾನಿಸಲು ಸುಪ್ರೀಂ ತಕ್ಷಣವೇ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಹೇಳಿರುವ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಇತ್ತೀಚಿನ ಸುಪ್ರೀಂಕೋರ್ಟ್ ನಿಲುವು ಒಂದು ಹಂತದಲ್ಲಿ ಸ್ವಾಗತಾರ್ಹ ಕ್ರಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರೈತ ಪ್ರತಿಭಟನೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ’ ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು. ಆಗ ಆಗಸ್ಟ್ 5, 2019 ರಂದು (370ನೆ ವಿಧಿ ರದ್ದು ಜಾರಿಯಾದ ದಿನ) ಏನಾಗುತ್ತದೆ ಎಂಬುದಕ್ಕೆ ಮುಂಚಿತವಾಗಿ ಜಮ್ಮು-ಕಾಶ್ಮೀರದ ಜೊತೆ ಯಾವುದೇ ಸಮಾಲೋಚನೆಗಳು ನಡೆಯಲೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ರಾಜ್ಯದ ಮೇಲೆ ಹೇರಿಕೆಯಾದ ಮತ್ತು ಅದರ ಸವಲತ್ತುಗಳನ್ನು ಕಿತ್ತುಕೊಂಡ ವಿಷಯಗಳಲ್ಲಿ ನಮ್ಮ ಮಾತುಗಳನ್ನು ಕೇಳಲು ಪ್ರಾರಂಭಿಸಬೇಕು ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು 2019 ರ ಆಗಸ್ಟ್ 29 ರಂದು ನೋಟಿಸ್ ನೀಡಿತ್ತು ಮತ್ತು ಅದನ್ನು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಐದು ನ್ಯಾಯಾಧೀಶರ ಪೀಠವು 2019 ರ ಅಕ್ಟೋಬರ್ 1ರಂದು ಈ ವಿಷಯವನ್ನು ಕೈಗೆತ್ತಿಕೊಂಡಿತು. ಆದರೆ ಕೆಲವರು ಇದನ್ನು ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಬೇಕು ಎಂಬ ಅಂಶವನ್ನು ಎತ್ತಿದರು. ಈ ಮನವಿಯನ್ನು ಮಾರ್ಚ್ 2, 2020 ರಂದು ತಿರಸ್ಕರಿಸಲಾಯಿತು. ಆದರೆ ಕೋವಿಡ್ -19 ಮತ್ತು ನಂತರದ ರಾಷ್ಟ್ರೀಯ ಲಾಕ್‌ಡೌನ್ ಕಾರಣದಿಂದಾಗಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವೂ ಸೇರಿ, ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡ ಪ್ರತಿಯೊಂದು ಪ್ರಮುಖ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...