Homeಮುಖಪುಟರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ - ಓಮರ್...

ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ' ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು.

- Advertisement -
- Advertisement -

ಕೃಷಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ ಹೋರಾಡುತ್ತಿರುವ ರೈತರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಿದೆ. ಇದು ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ

“ನನ್ನ ಪ್ರಶ್ನೆಯ ಮೂಲದಲ್ಲಿ ಸುಪ್ರೀಂಕೋರ್ಟ್ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಇಲ್ಲವೇ ಇಲ್ಲ. ರೈತ ಪ್ರತಿಭಟನೆಯೊಂದಿಗೆ ಏನು ನಡೆಯುತ್ತಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಅರಿತುಕೊಂಡು, ಈ ಅಮೋಘ ಹೋರಾಟದ ವಿಷಯಗಳಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ನೋಡಿದ್ದೇವೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಆಯೋಜಿಸಿದ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ 370 ಮತ್ತು 35ಎ ವಿಧಿಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ನೂರಾರು ಅರ್ಜಿಗಳನ್ನು ಆಲಿಸಲು ಮತ್ತು ತೀರ್ಮಾನಿಸಲು ಸುಪ್ರೀಂ ತಕ್ಷಣವೇ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಹೇಳಿರುವ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಇತ್ತೀಚಿನ ಸುಪ್ರೀಂಕೋರ್ಟ್ ನಿಲುವು ಒಂದು ಹಂತದಲ್ಲಿ ಸ್ವಾಗತಾರ್ಹ ಕ್ರಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರೈತ ಪ್ರತಿಭಟನೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ’ ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು. ಆಗ ಆಗಸ್ಟ್ 5, 2019 ರಂದು (370ನೆ ವಿಧಿ ರದ್ದು ಜಾರಿಯಾದ ದಿನ) ಏನಾಗುತ್ತದೆ ಎಂಬುದಕ್ಕೆ ಮುಂಚಿತವಾಗಿ ಜಮ್ಮು-ಕಾಶ್ಮೀರದ ಜೊತೆ ಯಾವುದೇ ಸಮಾಲೋಚನೆಗಳು ನಡೆಯಲೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ರಾಜ್ಯದ ಮೇಲೆ ಹೇರಿಕೆಯಾದ ಮತ್ತು ಅದರ ಸವಲತ್ತುಗಳನ್ನು ಕಿತ್ತುಕೊಂಡ ವಿಷಯಗಳಲ್ಲಿ ನಮ್ಮ ಮಾತುಗಳನ್ನು ಕೇಳಲು ಪ್ರಾರಂಭಿಸಬೇಕು ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು 2019 ರ ಆಗಸ್ಟ್ 29 ರಂದು ನೋಟಿಸ್ ನೀಡಿತ್ತು ಮತ್ತು ಅದನ್ನು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಐದು ನ್ಯಾಯಾಧೀಶರ ಪೀಠವು 2019 ರ ಅಕ್ಟೋಬರ್ 1ರಂದು ಈ ವಿಷಯವನ್ನು ಕೈಗೆತ್ತಿಕೊಂಡಿತು. ಆದರೆ ಕೆಲವರು ಇದನ್ನು ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಬೇಕು ಎಂಬ ಅಂಶವನ್ನು ಎತ್ತಿದರು. ಈ ಮನವಿಯನ್ನು ಮಾರ್ಚ್ 2, 2020 ರಂದು ತಿರಸ್ಕರಿಸಲಾಯಿತು. ಆದರೆ ಕೋವಿಡ್ -19 ಮತ್ತು ನಂತರದ ರಾಷ್ಟ್ರೀಯ ಲಾಕ್‌ಡೌನ್ ಕಾರಣದಿಂದಾಗಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವೂ ಸೇರಿ, ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡ ಪ್ರತಿಯೊಂದು ಪ್ರಮುಖ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...