Homeಮುಖಪುಟರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ - ಓಮರ್...

ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ' ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು.

- Advertisement -
- Advertisement -

ಕೃಷಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ ಹೋರಾಡುತ್ತಿರುವ ರೈತರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಿದೆ. ಇದು ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ

“ನನ್ನ ಪ್ರಶ್ನೆಯ ಮೂಲದಲ್ಲಿ ಸುಪ್ರೀಂಕೋರ್ಟ್ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಇಲ್ಲವೇ ಇಲ್ಲ. ರೈತ ಪ್ರತಿಭಟನೆಯೊಂದಿಗೆ ಏನು ನಡೆಯುತ್ತಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಅರಿತುಕೊಂಡು, ಈ ಅಮೋಘ ಹೋರಾಟದ ವಿಷಯಗಳಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ನೋಡಿದ್ದೇವೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಆಯೋಜಿಸಿದ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ 370 ಮತ್ತು 35ಎ ವಿಧಿಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ನೂರಾರು ಅರ್ಜಿಗಳನ್ನು ಆಲಿಸಲು ಮತ್ತು ತೀರ್ಮಾನಿಸಲು ಸುಪ್ರೀಂ ತಕ್ಷಣವೇ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಹೇಳಿರುವ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಇತ್ತೀಚಿನ ಸುಪ್ರೀಂಕೋರ್ಟ್ ನಿಲುವು ಒಂದು ಹಂತದಲ್ಲಿ ಸ್ವಾಗತಾರ್ಹ ಕ್ರಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರೈತ ಪ್ರತಿಭಟನೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ’ ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು. ಆಗ ಆಗಸ್ಟ್ 5, 2019 ರಂದು (370ನೆ ವಿಧಿ ರದ್ದು ಜಾರಿಯಾದ ದಿನ) ಏನಾಗುತ್ತದೆ ಎಂಬುದಕ್ಕೆ ಮುಂಚಿತವಾಗಿ ಜಮ್ಮು-ಕಾಶ್ಮೀರದ ಜೊತೆ ಯಾವುದೇ ಸಮಾಲೋಚನೆಗಳು ನಡೆಯಲೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ರಾಜ್ಯದ ಮೇಲೆ ಹೇರಿಕೆಯಾದ ಮತ್ತು ಅದರ ಸವಲತ್ತುಗಳನ್ನು ಕಿತ್ತುಕೊಂಡ ವಿಷಯಗಳಲ್ಲಿ ನಮ್ಮ ಮಾತುಗಳನ್ನು ಕೇಳಲು ಪ್ರಾರಂಭಿಸಬೇಕು ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು 2019 ರ ಆಗಸ್ಟ್ 29 ರಂದು ನೋಟಿಸ್ ನೀಡಿತ್ತು ಮತ್ತು ಅದನ್ನು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಐದು ನ್ಯಾಯಾಧೀಶರ ಪೀಠವು 2019 ರ ಅಕ್ಟೋಬರ್ 1ರಂದು ಈ ವಿಷಯವನ್ನು ಕೈಗೆತ್ತಿಕೊಂಡಿತು. ಆದರೆ ಕೆಲವರು ಇದನ್ನು ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಬೇಕು ಎಂಬ ಅಂಶವನ್ನು ಎತ್ತಿದರು. ಈ ಮನವಿಯನ್ನು ಮಾರ್ಚ್ 2, 2020 ರಂದು ತಿರಸ್ಕರಿಸಲಾಯಿತು. ಆದರೆ ಕೋವಿಡ್ -19 ಮತ್ತು ನಂತರದ ರಾಷ್ಟ್ರೀಯ ಲಾಕ್‌ಡೌನ್ ಕಾರಣದಿಂದಾಗಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವೂ ಸೇರಿ, ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡ ಪ್ರತಿಯೊಂದು ಪ್ರಮುಖ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...