Homeಮುಖಪುಟರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ - ಓಮರ್...

ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ' ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು.

- Advertisement -
- Advertisement -

ಕೃಷಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ ಹೋರಾಡುತ್ತಿರುವ ರೈತರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಿದೆ. ಇದು ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ

“ನನ್ನ ಪ್ರಶ್ನೆಯ ಮೂಲದಲ್ಲಿ ಸುಪ್ರೀಂಕೋರ್ಟ್ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಇಲ್ಲವೇ ಇಲ್ಲ. ರೈತ ಪ್ರತಿಭಟನೆಯೊಂದಿಗೆ ಏನು ನಡೆಯುತ್ತಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಅರಿತುಕೊಂಡು, ಈ ಅಮೋಘ ಹೋರಾಟದ ವಿಷಯಗಳಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ನೋಡಿದ್ದೇವೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಆಯೋಜಿಸಿದ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ 370 ಮತ್ತು 35ಎ ವಿಧಿಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ನೂರಾರು ಅರ್ಜಿಗಳನ್ನು ಆಲಿಸಲು ಮತ್ತು ತೀರ್ಮಾನಿಸಲು ಸುಪ್ರೀಂ ತಕ್ಷಣವೇ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಹೇಳಿರುವ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಇತ್ತೀಚಿನ ಸುಪ್ರೀಂಕೋರ್ಟ್ ನಿಲುವು ಒಂದು ಹಂತದಲ್ಲಿ ಸ್ವಾಗತಾರ್ಹ ಕ್ರಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರೈತ ಪ್ರತಿಭಟನೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ’ ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು. ಆಗ ಆಗಸ್ಟ್ 5, 2019 ರಂದು (370ನೆ ವಿಧಿ ರದ್ದು ಜಾರಿಯಾದ ದಿನ) ಏನಾಗುತ್ತದೆ ಎಂಬುದಕ್ಕೆ ಮುಂಚಿತವಾಗಿ ಜಮ್ಮು-ಕಾಶ್ಮೀರದ ಜೊತೆ ಯಾವುದೇ ಸಮಾಲೋಚನೆಗಳು ನಡೆಯಲೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ರಾಜ್ಯದ ಮೇಲೆ ಹೇರಿಕೆಯಾದ ಮತ್ತು ಅದರ ಸವಲತ್ತುಗಳನ್ನು ಕಿತ್ತುಕೊಂಡ ವಿಷಯಗಳಲ್ಲಿ ನಮ್ಮ ಮಾತುಗಳನ್ನು ಕೇಳಲು ಪ್ರಾರಂಭಿಸಬೇಕು ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು 2019 ರ ಆಗಸ್ಟ್ 29 ರಂದು ನೋಟಿಸ್ ನೀಡಿತ್ತು ಮತ್ತು ಅದನ್ನು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಐದು ನ್ಯಾಯಾಧೀಶರ ಪೀಠವು 2019 ರ ಅಕ್ಟೋಬರ್ 1ರಂದು ಈ ವಿಷಯವನ್ನು ಕೈಗೆತ್ತಿಕೊಂಡಿತು. ಆದರೆ ಕೆಲವರು ಇದನ್ನು ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಬೇಕು ಎಂಬ ಅಂಶವನ್ನು ಎತ್ತಿದರು. ಈ ಮನವಿಯನ್ನು ಮಾರ್ಚ್ 2, 2020 ರಂದು ತಿರಸ್ಕರಿಸಲಾಯಿತು. ಆದರೆ ಕೋವಿಡ್ -19 ಮತ್ತು ನಂತರದ ರಾಷ್ಟ್ರೀಯ ಲಾಕ್‌ಡೌನ್ ಕಾರಣದಿಂದಾಗಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವೂ ಸೇರಿ, ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡ ಪ್ರತಿಯೊಂದು ಪ್ರಮುಖ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...