Homeಮುಖಪುಟರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ - ಓಮರ್...

ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ' ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು.

- Advertisement -
- Advertisement -

ಕೃಷಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ ಹೋರಾಡುತ್ತಿರುವ ರೈತರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಿದೆ. ಇದು ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ

“ನನ್ನ ಪ್ರಶ್ನೆಯ ಮೂಲದಲ್ಲಿ ಸುಪ್ರೀಂಕೋರ್ಟ್ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಇಲ್ಲವೇ ಇಲ್ಲ. ರೈತ ಪ್ರತಿಭಟನೆಯೊಂದಿಗೆ ಏನು ನಡೆಯುತ್ತಿದೆ ಎಂಬುದನ್ನು ಸುಪ್ರೀಂ ಕೋರ್ಟ್ ಅರಿತುಕೊಂಡು, ಈ ಅಮೋಘ ಹೋರಾಟದ ವಿಷಯಗಳಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ನೋಡಿದ್ದೇವೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಆಯೋಜಿಸಿದ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ 370 ಮತ್ತು 35ಎ ವಿಧಿಗಳನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ನೂರಾರು ಅರ್ಜಿಗಳನ್ನು ಆಲಿಸಲು ಮತ್ತು ತೀರ್ಮಾನಿಸಲು ಸುಪ್ರೀಂ ತಕ್ಷಣವೇ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಹೇಳಿರುವ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಇತ್ತೀಚಿನ ಸುಪ್ರೀಂಕೋರ್ಟ್ ನಿಲುವು ಒಂದು ಹಂತದಲ್ಲಿ ಸ್ವಾಗತಾರ್ಹ ಕ್ರಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರೈತ ಪ್ರತಿಭಟನೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ‘ಕೃಷಿ ಕಾಯ್ದೆಗಳನ್ನು ತರುವುದಕ್ಕೆ ಮುಂಚೆ ಯಾವುದೇ ಸಮಾಲೋಚನೆಯನ್ನು ಒಳಗೊಂಡಿಲ್ಲ’ ಎಂಬ ಪದಗಳನ್ನು ಬಳಸಿದೆ. ಜಮ್ಮು-ಕಾಶ್ಮೀರದ ವಿಷಯವನ್ನೂ ಇದೇ ಬಗೆಯಲ್ಲಿ ಪರಿಶೀಲನೆ ಮಾಡಬೇಕು. ಆಗ ಆಗಸ್ಟ್ 5, 2019 ರಂದು (370ನೆ ವಿಧಿ ರದ್ದು ಜಾರಿಯಾದ ದಿನ) ಏನಾಗುತ್ತದೆ ಎಂಬುದಕ್ಕೆ ಮುಂಚಿತವಾಗಿ ಜಮ್ಮು-ಕಾಶ್ಮೀರದ ಜೊತೆ ಯಾವುದೇ ಸಮಾಲೋಚನೆಗಳು ನಡೆಯಲೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಜಮ್ಮು-ಕಾಶ್ಮೀರ ರಾಜ್ಯದ ಮೇಲೆ ಹೇರಿಕೆಯಾದ ಮತ್ತು ಅದರ ಸವಲತ್ತುಗಳನ್ನು ಕಿತ್ತುಕೊಂಡ ವಿಷಯಗಳಲ್ಲಿ ನಮ್ಮ ಮಾತುಗಳನ್ನು ಕೇಳಲು ಪ್ರಾರಂಭಿಸಬೇಕು ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅರ್ಜಿಗಳ ಕುರಿತು 2019 ರ ಆಗಸ್ಟ್ 29 ರಂದು ನೋಟಿಸ್ ನೀಡಿತ್ತು ಮತ್ತು ಅದನ್ನು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧ್ಯಕ್ಷತೆಯ ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಐದು ನ್ಯಾಯಾಧೀಶರ ಪೀಠವು 2019 ರ ಅಕ್ಟೋಬರ್ 1ರಂದು ಈ ವಿಷಯವನ್ನು ಕೈಗೆತ್ತಿಕೊಂಡಿತು. ಆದರೆ ಕೆಲವರು ಇದನ್ನು ಏಳು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಬೇಕು ಎಂಬ ಅಂಶವನ್ನು ಎತ್ತಿದರು. ಈ ಮನವಿಯನ್ನು ಮಾರ್ಚ್ 2, 2020 ರಂದು ತಿರಸ್ಕರಿಸಲಾಯಿತು. ಆದರೆ ಕೋವಿಡ್ -19 ಮತ್ತು ನಂತರದ ರಾಷ್ಟ್ರೀಯ ಲಾಕ್‌ಡೌನ್ ಕಾರಣದಿಂದಾಗಿ, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯವೂ ಸೇರಿ, ಸಾಂವಿಧಾನಿಕ ಪ್ರಶ್ನೆಗಳನ್ನು ಒಳಗೊಂಡ ಪ್ರತಿಯೊಂದು ಪ್ರಮುಖ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...