Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...