Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...