Homeಮುಖಪುಟಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

ಸುಪ್ರೀಂ ಕೋರ್ಟ್ ಮುಸ್ಲಿಂ ಪಕ್ಷಪಾತಿಯಾಗಿದೆ: ದ್ವೇಷಭಾಷಣಕಾರ ಚವ್ಹಾಂಕೆ ಬೆಂಬಲಿಗರ ಆರೋಪ

- Advertisement -
- Advertisement -

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಕೋಮುಗಲಭೆ ಸೃಷ್ಟಿಸಲು ಯತ್ನಿಸುವ ಸುದರ್ಶನ್ ಟಿವಿ ಮುಖ್ಯಸ್ಥ ಮತ್ತು ಹಿಂದುತ್ವ ಮುಖಂಡ ಸುರೇಶ್ ಚವ್ಹಾಂಕೆ ಬೆಂಬಲಿಗರು ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಸರ್ವೊಚ್ಚ ನ್ಯಾಯಾಲಯ ಮುಸ್ಲಿಮರ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದ್ದಾರೆ.

ಫೆಬ್ರವರಿ 5ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಹಿಂದುತ್ವ ಮುಖಂಡರು ಹಾಗೂ ಚವ್ಹಾಂಕೆ ಬೆಂಬಲಿಗರು ಪಾಲ್ಗೊಂಡಿದ್ದರು. ಚವ್ಹಾಂಕೆ ವಿರುದ್ಧ ಸುಪ್ರೀಂ ಕೋರ್ಟ್ ಜರುಗಿಸಿರುವ ಕ್ರಮಗಳನ್ನು ಖಂಡಿಸಿದ್ದಾರೆ.

2021ರಲ್ಲಿ ಸಾರ್ವಜನಿಕವಾಗಿ ಮಾತನಾಡುತ್ತಾ, ಹಿಂದೂ ರಾಷ್ಟ್ರ ನಿರ್ಮಾಣ ಮತ್ತು ಮುಸ್ಲಿಮವರನ್ನು ಕೊಲ್ಲುವ ಕುರಿತು ಚವ್ಹಾಂಕೆ ಹೇಳಿದ್ದನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. “ಅನಗತ್ಯ ಕಾನೂನು ಕಿರುಕುಳ ನೀಡುತ್ತಿರುವ ಕೋರ್ಟ್‌ ಮುಸ್ಲಿಮರ ಪರವಾಗಿದೆ” ಎಂದು ಚವ್ಹಾಂಕೆ ಬೆಂಬಲಿಗರು ದೂರಿದ್ದಾರೆ.

2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ಥಾಪಿಸಿದ ‘ಹಿಂದೂ ಯುವ ವಾಹಿನಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚವ್ಹಾಂಕೆ ಮಾಡಿದ ದ್ವೇಷ ಭಾಷಣವನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಟೀಕಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ದ್ವೇಷ ಭಾಷಣವನ್ನು ಮಾಡಲಾಗಿಲ್ಲ” ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಸಲ್ಲಿಸಿದ ಅಫಿಡವಿಟ್ ನೋಡಿ ಕೋರ್ಟ್ ಗರಂ ಆಗಿತ್ತು.

“ತಮ್ಮ ಸಮುದಾಯದ ನೈತಿಕತೆಯನ್ನು ಉಳಿಸಲು ಪ್ರೇರಣೆಗೊಂಡಿರುವ ಜನರಿಂದ ಸಭೆ ನಡೆಸಲಾಗಿದೆ” ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು.

ಸಮಾರಂಭದಲ್ಲಿ ‘ಪ್ರಮಾಣ ವಚನ’ ಬೋಧಿಸಿದ್ದ ಚವ್ಹಾಂಕೆ, “ಬೇಕಾದರೆ, ನಾವು ಅದಕ್ಕಾಗಿ ಕೊಲ್ಲುತ್ತೇವೆ. ಆದರೆ ನಾವು ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಪೂರ್ವಜರು ಮತ್ತು ದೇವತೆಗಳು ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡಲಿ” ಎಂದಿದ್ದರು.

ಭಾನುವಾರ (ಫೆಬ್ರವರಿ 5) ನಡೆದ ಕಾರ್ಯಕ್ರಮದಲ್ಲಿ ಚವ್ಹಾಂಕೆಯವರ ಬೆಂಬಲಿಗರು (ಅವರಲ್ಲಿ ಅನೇಕ ಹಿಂದುತ್ವ ನಾಯಕರು) ಮಾತನಾಡುತ್ತಾ, “ಚವ್ಹಾಂಕೆ ಮಾಡಿರುವ ಭಾಷಣದಲ್ಲಿ ಯಾವುದೇ ತಪ್ಪಿಲ್ಲ. ಸುಪ್ರೀಂ ಕೋರ್ಟ್ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಹಿಂದೂಗಳ ಮೇಲೆ ಕಠಿಣವಾಗಿ ವರ್ತಿಸಿದರೆ, ಇತರ ಧರ್ಮಗಳೊಂದಿಗೆ ಕೋರ್ಟ್ ಉದಾರವಾಗಿದೆ” ಎಂದು ಆರೋಪಿಸಿದ್ದಾರೆ.

ಭಾಷಣಕಾರರಲ್ಲಿ ಒಬ್ಬರಾದ ರಾಷ್ಟ್ರ ನಿರ್ಮಾಣ ಪಕ್ಷದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಆನಂದ್ ಕುಮಾರ್, “ತನಿಖೆಯನ್ನು ನಡೆ‌ಸಲಾಗಿದ್ದು ಚವ್ಹಾಂಕೆ ಅವರ ವಿರುದ್ಧ ಯಾವುದೇ ಅಪರಾಧಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದರೂ ಕೋರ್ಟ್ ಸುಮ್ಮನೆ ಬಿಟ್ಟಿಲ್ಲ. ನೀವು ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಥವಾ ಯಾರನ್ನಾದರೂ ಬಂಧಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಪೊಲೀಸರನ್ನು ಕೇಳುತ್ತಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇಸ್ಲಾಂ ಪರವಾಗಿ ಪಕ್ಷಪಾತಿಯಾಗಿದೆ ಎಂದು ಅಭಿಪ್ರಾಯ ತಾಳಿದ ಅವರು, “ಮುಸ್ಲಿಂ ತುಷ್ಟೀಕರಣದಲ್ಲಿ ಸುಪ್ರೀಂ ಕೋರ್ಟ್ ತೊಡಗಿದೆ” ಎಂದು ಹೇಳಿದ್ದಾರೆ.

ರಾಗಿಣಿ ತಿವಾರಿ, ಸೂರಜ್ ಪಾಲ್ ಅಮ್ಮು, ಆಸ್ತಾ ಮಾ ಮತ್ತು ಅನ್ನಪೂರ್ಣ ಭಾರತಿ ಅವರಂತಹ ಹಿಂದುತ್ವ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಚವ್ಹಾಂಕೆ ಇಲ್ಲಿ ಇರಲಿಲ್ಲ. ಸರಿಸುಮಾರು 300-400 ಜನ ಸೇರಿದ್ದರು, ಅದರಲ್ಲಿ ಮೂರನೇ ಒಂದು ಭಾಗದಷ್ಟು ಶಾಲಾ ವಿದ್ಯಾರ್ಥಿಗಳಿದ್ದರು ಎಂದು ‘ದಿ ವೈರ್‌’ ವರದಿ ಮಾಡಿದೆ.

“ನಮ್ಮ ಗುರುಗಳು (ಶಿಕ್ಷಕರು) ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ. ನಾವು ಏಕೆ ಬಂದಿದ್ದೇವೆ ಎಂಬ ಕಾರಣ ನನಗೆ ತಿಳಿದಿಲ್ಲ” ಎಂದು ಹರಿಯಾಣದ ಪಲ್ವಾಲ್‌ನಿಂದ ಬಂದಿದ್ದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ.

ಸುಪ್ರೀಂ ಕೋರ್ಟ್‌ನ ವಾಗ್ದಂಡನೆಯ ನಂತರ, ದೆಹಲಿ ಪೊಲೀಸರು ಸುರೇಶ್ ಚವ್ಹಾಂಕೆ ವಿರುದ್ಧ ಮೇ 4, 2022 ರಂದು ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಜನ್ಮ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು)  298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಪದಗಳನ್ನು ಉಚ್ಚರಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 10, 2023ರಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು. “ಕಳೆದ ವರ್ಷ ಎಫ್‌ಐಆರ್ ದಾಖಲಿಸಿದ ಎಂಟು ತಿಂಗಳ ನಂತರವೂ ಯಾವುದೇ ಬಂಧನವಿಲ್ಲ ಮಾಡಲಾಗಿಲ್ಲ, ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ, ಪ್ರಕರಣದಲ್ಲಿ ಪ್ರಗತಿ ಸಾಧಿಸಿಲ್ಲ” ಎಂದು ಉಲ್ಲೇಖಿಸಿತ್ತು.

ಜಂತರ್ ಮಂತರ್ ಕಾರ್ಯಕ್ರಮಕ್ಕೂ ಮುನ್ನ ಚವ್ಹಾಂಕೆ ಅವರು ಟ್ವಿಟರ್‌ನಲ್ಲಿ “ಹಿಂದೂ ರಾಷ್ಟ್ರದ ಪ್ರಮಾಣ ವಚನ ಸ್ವೀಕಾರ ಮಾಡುವುದು ಹೇಗೆ ಅಪರಾಧ?” ಎಂಬ ಪೋಸ್ಟರ್ ಅನ್ನು ಟ್ವೀಟ್ ಮಾಡಿದ್ದರು.

ಕಾರ್ಯಕ್ರಮದ ನಂತರ ಅವರು ಮತ್ತಷ್ಟು ಟ್ವೀಟ್‌ಗಳನ್ನು ಮಾಡಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿರುವುದು ಸೇರಿದಂತೆ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...