Homeಮುಖಪುಟ'ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

‘ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಿಜೆಪಿ ಅಸ್ಸಾಂ ರಾಜ್ಯದ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾದ ಎಐ ಆಧಾರಿತ ‘ಇಸ್ಲಾಮೋಫೋಬಿಕ್’ ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಅಸ್ಸಾಂ ಬಿಜೆಪಿ, ಅಸ್ಸಾಂ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಮಂಗಳವಾರ (ಅ.7) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರ ಅಡ್ವೊಕೇಟ್ ಲಝೀಫ್ ಅಹ್ಮದ್ ಪರ ವಕೀಲ ನಿಝಾಮ್ ಪಾಷಾ ಅವರ ವಾದವನ್ನು ಆಲಿಸಿದ  ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೋಟಿಸ್ ಜಾರಿ ಮಾಡಿದೆ.

“ಮುಂಬರುವ ಚುನಾವಣೆಯ ಭಾಗವಾಗಿ ಒಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬರದಿದ್ದರೆ, ಒಂದು ನಿರ್ದಿಷ್ಟ ಸಮುದಾಯವು ಅಧಿಕಾರ ವಹಿಸಿಕೊಳ್ಳುತ್ತದೆ ಎಂದು ಅದರಲ್ಲಿ ತೋರಿಸಲಾಗಿದೆ. ಟೋಪಿ ಮತ್ತು ಗಡ್ಡ ಬಿಟ್ಟ ಜನರನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಹಾಗಾಗಿ, ವಿಡಿಯೋ ಪೋಸ್ಟ್‌ ಮಾಡಿದವರ ವಿರುದ್ದ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದರು.

ಮನವಿ ಆಲಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ.

ಬಿಜೆಪಿ ಅಸ್ಸಾಂ ಘಟಕ ಸೆಪ್ಟೆಂಬರ್ 15ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯದಿದ್ದರೆ ಅಸ್ಸಾಂ ಅನ್ನು ಮುಸ್ಲಿಮರು ವಶಪಡಿಸಿಕೊಳ್ಳುತ್ತಾರೆ ಎಂಬ ‘ಸುಳ್ಳು ನಿರೂಪಣೆ’ಯನ್ನು ಇದರಲ್ಲಿ ಮಾಡಲಾಗಿದೆ. ಟೀ ಎಸ್ಟೇಟ್‌ಗಳು, ಗುವಾಹಟಿ ವಿಮಾನ ನಿಲ್ದಾಣ, ಗುವಾಹಟಿ ಅಕೋಲಾಡ್, ಅಸ್ಸಾಂ ರಂಗರ್, ಗುವಾಹಟಿ ಕ್ರೀಡಾಂಗಣ, ರಂಗ್ ಘರ್, ಗುವಾಹಟಿ ಪಟ್ಟಣವನ್ನು ಮುಸ್ಲಿಂ ಜನರು (ಸ್ಕಲ್‌ಟೋಪಿ ಮತ್ತು ಬುರ್ಖಾ ಧರಿಸಿದವರು) ವಶಪಡಿಸಿಕೊಂಡಂತೆ ವಿಡಿಯೋ ತೋರಿಸುತ್ತದೆ. ಅಸ್ಸಾಂಗೆ ಮುಸ್ಲಿಮರಾಗಿ ಅಕ್ರಮ ವಲಸಿಗರು ಬರುವುದನ್ನು ವಿಡಿಯೋ ತೋರಿಸುತ್ತದೆ. ಮುಸ್ಲಿಮರು ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಪರಿಣಾಮ ಅಂತಿಮವಾಗಿ, ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂ ಜನಸಂಖ್ಯೆ ಇದೆ ಎಂದು ವಿಡಿಯೋ ತೋರಿಸುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಅರ್ಜಿದಾರರು, ಬಿಜೆಪಿ ಅಸ್ಸಾಂ ಘಟಕ ಭಾರತೀಯ ಸಂವಿಧಾನದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿರಬೇಕು. ಆದರೆ, ಅವರ ಅಧಿಕೃತ ಎಕ್ಸ್‌ ಖಾತೆಯಿಂದ ಹಂಚಿಕೊಳ್ಳಲಾದ ಒಂದು ಎಐ-ನಿರ್ಮಿತ ವಿಡಿಯೋ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಕೆಟ್ಟದ್ದಾಗಿ ಚಿತ್ರಿಸಿದೆ ಮತ್ತು ರಾಕ್ಷಸಸೀಕರಿಸಿದೆ ಎಂದು ಆರೋಪಿಸಿದ್ದಾರೆ. ಒಂದು ರಾಜ್ಯಕ್ಕೆ ಸಂಭವಿಸಬಹುದಾದ ಅತ್ಯಂತ ಕೆಟ್ಟ ಭವಿಷ್ಯವೆಂದರೆ ಮುಸ್ಲಿಮರು ಆ ರಾಜ್ಯವನ್ನು ತಮ್ಮ ಆಡಳಿತಕ್ಕೆ ತೆಗೆದುಕೊಳ್ಳುವುದು. ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ರಾಜ್ಯವನ್ನು ಈ ಗತಿಯಿಂದ ರಕ್ಷಿಸಬಹುದು ಎಂಬ ಭರವಸೆಯ ಮೂಲಕ ಜನರ ಬೆಂಬಲವನ್ನು ಕೋರಲಾಗಿದೆ” ಅರ್ಜಿಯಲ್ಲಿ ತಿಳಿಸಲಾಗಿದೆ.

ಅಶಾಂತಿ ಮತ್ತು ದ್ವೇಷವನ್ನು ತಡೆಗಟ್ಟುವ ಸಲುವಾಗಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಲು ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...