Homeಮುಖಪುಟ'ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

‘ಇಸ್ಲಾಮೋಫೋಬಿಕ್’ ವಿಡಿಯೋ: ಅಸ್ಸಾಂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಬಿಜೆಪಿ ಅಸ್ಸಾಂ ರಾಜ್ಯದ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾದ ಎಐ ಆಧಾರಿತ ‘ಇಸ್ಲಾಮೋಫೋಬಿಕ್’ ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಅಸ್ಸಾಂ ಬಿಜೆಪಿ, ಅಸ್ಸಾಂ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಮಂಗಳವಾರ (ಅ.7) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರ ಅಡ್ವೊಕೇಟ್ ಲಝೀಫ್ ಅಹ್ಮದ್ ಪರ ವಕೀಲ ನಿಝಾಮ್ ಪಾಷಾ ಅವರ ವಾದವನ್ನು ಆಲಿಸಿದ  ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೋಟಿಸ್ ಜಾರಿ ಮಾಡಿದೆ.

“ಮುಂಬರುವ ಚುನಾವಣೆಯ ಭಾಗವಾಗಿ ಒಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬರದಿದ್ದರೆ, ಒಂದು ನಿರ್ದಿಷ್ಟ ಸಮುದಾಯವು ಅಧಿಕಾರ ವಹಿಸಿಕೊಳ್ಳುತ್ತದೆ ಎಂದು ಅದರಲ್ಲಿ ತೋರಿಸಲಾಗಿದೆ. ಟೋಪಿ ಮತ್ತು ಗಡ್ಡ ಬಿಟ್ಟ ಜನರನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಹಾಗಾಗಿ, ವಿಡಿಯೋ ಪೋಸ್ಟ್‌ ಮಾಡಿದವರ ವಿರುದ್ದ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದರು.

ಮನವಿ ಆಲಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ.

ಬಿಜೆಪಿ ಅಸ್ಸಾಂ ಘಟಕ ಸೆಪ್ಟೆಂಬರ್ 15ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯದಿದ್ದರೆ ಅಸ್ಸಾಂ ಅನ್ನು ಮುಸ್ಲಿಮರು ವಶಪಡಿಸಿಕೊಳ್ಳುತ್ತಾರೆ ಎಂಬ ‘ಸುಳ್ಳು ನಿರೂಪಣೆ’ಯನ್ನು ಇದರಲ್ಲಿ ಮಾಡಲಾಗಿದೆ. ಟೀ ಎಸ್ಟೇಟ್‌ಗಳು, ಗುವಾಹಟಿ ವಿಮಾನ ನಿಲ್ದಾಣ, ಗುವಾಹಟಿ ಅಕೋಲಾಡ್, ಅಸ್ಸಾಂ ರಂಗರ್, ಗುವಾಹಟಿ ಕ್ರೀಡಾಂಗಣ, ರಂಗ್ ಘರ್, ಗುವಾಹಟಿ ಪಟ್ಟಣವನ್ನು ಮುಸ್ಲಿಂ ಜನರು (ಸ್ಕಲ್‌ಟೋಪಿ ಮತ್ತು ಬುರ್ಖಾ ಧರಿಸಿದವರು) ವಶಪಡಿಸಿಕೊಂಡಂತೆ ವಿಡಿಯೋ ತೋರಿಸುತ್ತದೆ. ಅಸ್ಸಾಂಗೆ ಮುಸ್ಲಿಮರಾಗಿ ಅಕ್ರಮ ವಲಸಿಗರು ಬರುವುದನ್ನು ವಿಡಿಯೋ ತೋರಿಸುತ್ತದೆ. ಮುಸ್ಲಿಮರು ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಪರಿಣಾಮ ಅಂತಿಮವಾಗಿ, ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂ ಜನಸಂಖ್ಯೆ ಇದೆ ಎಂದು ವಿಡಿಯೋ ತೋರಿಸುತ್ತದೆ” ಎಂದು ಅರ್ಜಿದಾರರು ಹೇಳಿದ್ದಾರೆ.

ಅರ್ಜಿದಾರರು, ಬಿಜೆಪಿ ಅಸ್ಸಾಂ ಘಟಕ ಭಾರತೀಯ ಸಂವಿಧಾನದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿರಬೇಕು. ಆದರೆ, ಅವರ ಅಧಿಕೃತ ಎಕ್ಸ್‌ ಖಾತೆಯಿಂದ ಹಂಚಿಕೊಳ್ಳಲಾದ ಒಂದು ಎಐ-ನಿರ್ಮಿತ ವಿಡಿಯೋ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಕೆಟ್ಟದ್ದಾಗಿ ಚಿತ್ರಿಸಿದೆ ಮತ್ತು ರಾಕ್ಷಸಸೀಕರಿಸಿದೆ ಎಂದು ಆರೋಪಿಸಿದ್ದಾರೆ. ಒಂದು ರಾಜ್ಯಕ್ಕೆ ಸಂಭವಿಸಬಹುದಾದ ಅತ್ಯಂತ ಕೆಟ್ಟ ಭವಿಷ್ಯವೆಂದರೆ ಮುಸ್ಲಿಮರು ಆ ರಾಜ್ಯವನ್ನು ತಮ್ಮ ಆಡಳಿತಕ್ಕೆ ತೆಗೆದುಕೊಳ್ಳುವುದು. ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ರಾಜ್ಯವನ್ನು ಈ ಗತಿಯಿಂದ ರಕ್ಷಿಸಬಹುದು ಎಂಬ ಭರವಸೆಯ ಮೂಲಕ ಜನರ ಬೆಂಬಲವನ್ನು ಕೋರಲಾಗಿದೆ” ಅರ್ಜಿಯಲ್ಲಿ ತಿಳಿಸಲಾಗಿದೆ.

ಅಶಾಂತಿ ಮತ್ತು ದ್ವೇಷವನ್ನು ತಡೆಗಟ್ಟುವ ಸಲುವಾಗಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಲು ವಿಡಿಯೋವನ್ನು ತೆಗೆದು ಹಾಕಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....