Homeಮುಖಪುಟನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

- Advertisement -
- Advertisement -

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ, ಆ ಬಗ್ಗೆ ಕಾನೂನಿಗೆ ಅನುಸಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ, ಇದನ್ನು ತುರಾತುರಿಯಲ್ಲಿ ಮಾಡಲಾಗಿದೆ. ಆಗಿನ ಹಣಕಾಸು ಸಚಿವರಿಗೂ ಈ ಬಗ್ಗೆ ಗೊತ್ತಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೈದರಾಬಾದ್‌ನಲ್ಲಿ ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಆಯೋಜಿಸಿದ್ದ ನ್ಯಾಯಾಲಯಗಳು ಮತ್ತು ಸಂವಿಧಾನ ಸಮ್ಮೇಳನ 2024ನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಅವರ ನೋಟು ಬ್ಯಾನ್‌  ಬಗ್ಗೆ ಒಂದು ಸಂಜೆ  ಮಾತುಕತೆ ನಡೆಸಿದರು ಮತ್ತು ಮರುದಿನ ನೋಟು ಅಮಾನ್ಯೀಕರಣವು ಸಂಭವಿಸಿತು. ಭಾರತವು ಪೇಪರ್ ಕರೆನ್ಸಿಯಿಂದ ಪ್ಲಾಸ್ಟಿಕ್ ಕರೆನ್ಸಿಗೆ ಹೋಗಲು ಬಯಸಿದರೆ, ಖಂಡಿತವಾಗಿ, ನೋಟು ಬ್ಯಾನ್‌ ಅದಕ್ಕೆ ಕಾರಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

2023ರ ವರ್ಷದಲ್ಲಿ ನಾನು ಬರೆದಿರುವ ಕೆಲವು ಸೇರಿದಂತೆ ಕೆಲವು ಪ್ರಮುಖ ತೀರ್ಪುಗಳ ಬಗ್ಗೆ ಮಾತನಾಡುತ್ತೇನೆ, ನಮ್ಮ ಪ್ರಜಾಸತ್ತಾತ್ಮಕ ಸಮಾಜದ ಅಡಿಪಾಯವನ್ನು ಸುಪ್ರೀಂಕೋರ್ಟ್‌ ಹೇಗೆ ಬಲಪಡಿಸಿದೆ ಎಂಬುದರ ಕುರಿತು ನಾನು ಮಾತನಾಡುತ್ತೇನೆ. ಕೋವಿಡ್-19 2020ರ ಹಿನ್ನೆಲೆಯೊಂದಿಗೆ ನಾನು ಪ್ರಾರಂಭಿಸುತ್ತೇನೆ, ಲಾಕ್‌ಡೌನ್‌ನಿಂದಾಗಿ ಸುಪ್ರೀಂಕೋರ್ಟ್‌ ಮತ್ತು ಇತರ ನ್ಯಾಯಾಲಯಗಳಲ್ಲಿನ ವಿಚಾರಣೆಗಳು ಕಡಿಮೆಯಾದವು ಮತ್ತು ವಿಚಾರಣೆಗಳನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನಡೆಸಲಾಗುತ್ತಿತ್ತು. ಸಾಂಕ್ರಾಮಿಕ ರೋಗದ ನಂತರ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಯುಯು ಲಲಿತ್  ಅವರು ಎಸ್‌ಸಿಯ ಕೆಲಸವನ್ನು ಶ್ರದ್ಧೆಯಿಂದ ಮುನ್ನಡೆಸಿದರು. ಅವರು ದೀರ್ಘಕಾಲ ಬಾಕಿ ಇರುವ ಪ್ರಕರಣಗಳನ್ನು ಸುಧಾರಿಸಲು ಮತ್ತು ವಿಲೇವಾರಿ ಮಾಡಲು ನಿರ್ಧರಿಸಿದರು ಮತ್ತು ಆದ್ದರಿಂದ, ಅವರು 5-ಸಂವಿಧಾನ ಪೀಠಗಳನ್ನು ಸ್ಥಾಪಿಸಿದರು. ತೀರಾ ಇತ್ತೀಚೆಗೆ ಹೈಕೋರ್ಟ್‌ಗೆ ಸೇರಿದ್ದ ನನ್ನನ್ನೂ ಒಳಗೊಂಡಂತೆ ಸುಪ್ರೀಂಕೋರ್ಟ್‌ನ ಎಲ್ಲಾ 30 ನ್ಯಾಯಾಧೀಶರಿಗೆ ಸಂವಿಧಾನ ಪೀಠದಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರ

ಸಾಂವಿಧಾನಿಕ ಪೀಠಗಳು ಕಾನೂನು ವ್ಯಾಪ್ತಿಗೆ ಒಳಪಡುವ 25 ದೀರ್ಘ ಬಾಕಿ ಪ್ರಕರಣಗಳನ್ನು ಕೈಗೆತ್ತಿಕೊಂಡವು. ವಿವೇಕ್ ನಾರಾಯಣ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ 2023ರ ಪ್ರಕರಣವನ್ನು ಎಲ್ಲರೂ ಓದಲೇಬೇಕು. ಇದು ನೋಟು ಅಮಾನ್ಯೀಕರಣ ಕೇಸ್ ಎಂದು ಜನಪ್ರಿಯವಾಗಿದೆ, ಆ ಪೀಠದ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 8, 2016ರಂದು 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧ  ಮಾಡಿದಾಗ ಏನಾಯಿತು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕುತೂಹಲಕಾರಿ ಅಂಶವೆಂದರೆ ಆ ಕಾಲದ ಭಾರತೀಯ ಆರ್ಥಿಕತೆಯಲ್ಲಿ 86% ಕರೆನ್ಸಿಯು 500 ಮತ್ತು 1,000 ರೂಪಾಯಿ ನೋಟುಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

86% ರಷ್ಟು ಕರೆನ್ಸಿಯು 500 ಮತ್ತು 1,000 ನೋಟುಗಳಾಗಿದ್ದು, ಆ ದಿನಗಳಲ್ಲಿ ಕೆಲಸಕ್ಕೆ ಹೋದ ಒಬ್ಬ ಕಾರ್ಮಿಕನು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿಗೆ ಹೋಗುವ ಮೊದಲು ತನ್ನ ನೋಟುಗಳನ್ನು ಬದಲಾಯಿಸಿಕೊಳ್ಳಬೇಕಾಗಿತ್ತು ಎಂದು ಊಹಿಸಿಕೊಳ್ಳಿ. 98% ಕರೆನ್ಸಿ ಆರ್‌ಬಿಐಗೆ ಮರಳಿದೆ, ಹಾಗಾದರೆ ನೋಟು ರದ್ದತಿಯ ಗುರಿ ಏನು ಎಂದು ಪ್ರಶ್ನಿಸಿದ್ದಾರೆ.

ಕಪ್ಪುಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸಲು ಇದು ಉತ್ತಮ ಮಾರ್ಗ ಎಂದು ನಾನು ಭಾವಿಸಿದ್ದೆ. ಅದರ ನಂತರ ಆದಾಯ ತೆರಿಗೆ ಪ್ರಕ್ರಿಯೆಗಳ ಬಗ್ಗೆ ಏನಾಯಿತು ಎಂದು ನಮಗೆ ಗೊತ್ತಿಲ್ಲ. ಆದ್ದರಿಂದ, ಸಾಮಾನ್ಯ ಮನುಷ್ಯನ ಸಂಕಟವು ನಿಜವಾಗಿಯೂ ನನ್ನನ್ನು ಚಿಂತಗೀಡು ಮಾಡಿತ್ತು, ಅದೇ ಕಾರಣಕ್ಕೆ ‘ವಿವೇಕ್ ನಾರಾಯಣ ಶರ್ಮಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ’ ನಾನು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...