Homeಮುಖಪುಟನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

- Advertisement -
- Advertisement -

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ, ಆ ಬಗ್ಗೆ ಕಾನೂನಿಗೆ ಅನುಸಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ, ಇದನ್ನು ತುರಾತುರಿಯಲ್ಲಿ ಮಾಡಲಾಗಿದೆ. ಆಗಿನ ಹಣಕಾಸು ಸಚಿವರಿಗೂ ಈ ಬಗ್ಗೆ ಗೊತ್ತಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೈದರಾಬಾದ್‌ನಲ್ಲಿ ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಆಯೋಜಿಸಿದ್ದ ನ್ಯಾಯಾಲಯಗಳು ಮತ್ತು ಸಂವಿಧಾನ ಸಮ್ಮೇಳನ 2024ನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಅವರ ನೋಟು ಬ್ಯಾನ್‌  ಬಗ್ಗೆ ಒಂದು ಸಂಜೆ  ಮಾತುಕತೆ ನಡೆಸಿದರು ಮತ್ತು ಮರುದಿನ ನೋಟು ಅಮಾನ್ಯೀಕರಣವು ಸಂಭವಿಸಿತು. ಭಾರತವು ಪೇಪರ್ ಕರೆನ್ಸಿಯಿಂದ ಪ್ಲಾಸ್ಟಿಕ್ ಕರೆನ್ಸಿಗೆ ಹೋಗಲು ಬಯಸಿದರೆ, ಖಂಡಿತವಾಗಿ, ನೋಟು ಬ್ಯಾನ್‌ ಅದಕ್ಕೆ ಕಾರಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

2023ರ ವರ್ಷದಲ್ಲಿ ನಾನು ಬರೆದಿರುವ ಕೆಲವು ಸೇರಿದಂತೆ ಕೆಲವು ಪ್ರಮುಖ ತೀರ್ಪುಗಳ ಬಗ್ಗೆ ಮಾತನಾಡುತ್ತೇನೆ, ನಮ್ಮ ಪ್ರಜಾಸತ್ತಾತ್ಮಕ ಸಮಾಜದ ಅಡಿಪಾಯವನ್ನು ಸುಪ್ರೀಂಕೋರ್ಟ್‌ ಹೇಗೆ ಬಲಪಡಿಸಿದೆ ಎಂಬುದರ ಕುರಿತು ನಾನು ಮಾತನಾಡುತ್ತೇನೆ. ಕೋವಿಡ್-19 2020ರ ಹಿನ್ನೆಲೆಯೊಂದಿಗೆ ನಾನು ಪ್ರಾರಂಭಿಸುತ್ತೇನೆ, ಲಾಕ್‌ಡೌನ್‌ನಿಂದಾಗಿ ಸುಪ್ರೀಂಕೋರ್ಟ್‌ ಮತ್ತು ಇತರ ನ್ಯಾಯಾಲಯಗಳಲ್ಲಿನ ವಿಚಾರಣೆಗಳು ಕಡಿಮೆಯಾದವು ಮತ್ತು ವಿಚಾರಣೆಗಳನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನಡೆಸಲಾಗುತ್ತಿತ್ತು. ಸಾಂಕ್ರಾಮಿಕ ರೋಗದ ನಂತರ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಯುಯು ಲಲಿತ್  ಅವರು ಎಸ್‌ಸಿಯ ಕೆಲಸವನ್ನು ಶ್ರದ್ಧೆಯಿಂದ ಮುನ್ನಡೆಸಿದರು. ಅವರು ದೀರ್ಘಕಾಲ ಬಾಕಿ ಇರುವ ಪ್ರಕರಣಗಳನ್ನು ಸುಧಾರಿಸಲು ಮತ್ತು ವಿಲೇವಾರಿ ಮಾಡಲು ನಿರ್ಧರಿಸಿದರು ಮತ್ತು ಆದ್ದರಿಂದ, ಅವರು 5-ಸಂವಿಧಾನ ಪೀಠಗಳನ್ನು ಸ್ಥಾಪಿಸಿದರು. ತೀರಾ ಇತ್ತೀಚೆಗೆ ಹೈಕೋರ್ಟ್‌ಗೆ ಸೇರಿದ್ದ ನನ್ನನ್ನೂ ಒಳಗೊಂಡಂತೆ ಸುಪ್ರೀಂಕೋರ್ಟ್‌ನ ಎಲ್ಲಾ 30 ನ್ಯಾಯಾಧೀಶರಿಗೆ ಸಂವಿಧಾನ ಪೀಠದಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರ

ಸಾಂವಿಧಾನಿಕ ಪೀಠಗಳು ಕಾನೂನು ವ್ಯಾಪ್ತಿಗೆ ಒಳಪಡುವ 25 ದೀರ್ಘ ಬಾಕಿ ಪ್ರಕರಣಗಳನ್ನು ಕೈಗೆತ್ತಿಕೊಂಡವು. ವಿವೇಕ್ ನಾರಾಯಣ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ 2023ರ ಪ್ರಕರಣವನ್ನು ಎಲ್ಲರೂ ಓದಲೇಬೇಕು. ಇದು ನೋಟು ಅಮಾನ್ಯೀಕರಣ ಕೇಸ್ ಎಂದು ಜನಪ್ರಿಯವಾಗಿದೆ, ಆ ಪೀಠದ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 8, 2016ರಂದು 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧ  ಮಾಡಿದಾಗ ಏನಾಯಿತು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕುತೂಹಲಕಾರಿ ಅಂಶವೆಂದರೆ ಆ ಕಾಲದ ಭಾರತೀಯ ಆರ್ಥಿಕತೆಯಲ್ಲಿ 86% ಕರೆನ್ಸಿಯು 500 ಮತ್ತು 1,000 ರೂಪಾಯಿ ನೋಟುಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

86% ರಷ್ಟು ಕರೆನ್ಸಿಯು 500 ಮತ್ತು 1,000 ನೋಟುಗಳಾಗಿದ್ದು, ಆ ದಿನಗಳಲ್ಲಿ ಕೆಲಸಕ್ಕೆ ಹೋದ ಒಬ್ಬ ಕಾರ್ಮಿಕನು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿಗೆ ಹೋಗುವ ಮೊದಲು ತನ್ನ ನೋಟುಗಳನ್ನು ಬದಲಾಯಿಸಿಕೊಳ್ಳಬೇಕಾಗಿತ್ತು ಎಂದು ಊಹಿಸಿಕೊಳ್ಳಿ. 98% ಕರೆನ್ಸಿ ಆರ್‌ಬಿಐಗೆ ಮರಳಿದೆ, ಹಾಗಾದರೆ ನೋಟು ರದ್ದತಿಯ ಗುರಿ ಏನು ಎಂದು ಪ್ರಶ್ನಿಸಿದ್ದಾರೆ.

ಕಪ್ಪುಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸಲು ಇದು ಉತ್ತಮ ಮಾರ್ಗ ಎಂದು ನಾನು ಭಾವಿಸಿದ್ದೆ. ಅದರ ನಂತರ ಆದಾಯ ತೆರಿಗೆ ಪ್ರಕ್ರಿಯೆಗಳ ಬಗ್ಗೆ ಏನಾಯಿತು ಎಂದು ನಮಗೆ ಗೊತ್ತಿಲ್ಲ. ಆದ್ದರಿಂದ, ಸಾಮಾನ್ಯ ಮನುಷ್ಯನ ಸಂಕಟವು ನಿಜವಾಗಿಯೂ ನನ್ನನ್ನು ಚಿಂತಗೀಡು ಮಾಡಿತ್ತು, ಅದೇ ಕಾರಣಕ್ಕೆ ‘ವಿವೇಕ್ ನಾರಾಯಣ ಶರ್ಮಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ’ ನಾನು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...