Homeಮುಖಪುಟನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

- Advertisement -
- Advertisement -

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ, ಆ ಬಗ್ಗೆ ಕಾನೂನಿಗೆ ಅನುಸಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ, ಇದನ್ನು ತುರಾತುರಿಯಲ್ಲಿ ಮಾಡಲಾಗಿದೆ. ಆಗಿನ ಹಣಕಾಸು ಸಚಿವರಿಗೂ ಈ ಬಗ್ಗೆ ಗೊತ್ತಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೈದರಾಬಾದ್‌ನಲ್ಲಿ ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಆಯೋಜಿಸಿದ್ದ ನ್ಯಾಯಾಲಯಗಳು ಮತ್ತು ಸಂವಿಧಾನ ಸಮ್ಮೇಳನ 2024ನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಅವರ ನೋಟು ಬ್ಯಾನ್‌  ಬಗ್ಗೆ ಒಂದು ಸಂಜೆ  ಮಾತುಕತೆ ನಡೆಸಿದರು ಮತ್ತು ಮರುದಿನ ನೋಟು ಅಮಾನ್ಯೀಕರಣವು ಸಂಭವಿಸಿತು. ಭಾರತವು ಪೇಪರ್ ಕರೆನ್ಸಿಯಿಂದ ಪ್ಲಾಸ್ಟಿಕ್ ಕರೆನ್ಸಿಗೆ ಹೋಗಲು ಬಯಸಿದರೆ, ಖಂಡಿತವಾಗಿ, ನೋಟು ಬ್ಯಾನ್‌ ಅದಕ್ಕೆ ಕಾರಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

2023ರ ವರ್ಷದಲ್ಲಿ ನಾನು ಬರೆದಿರುವ ಕೆಲವು ಸೇರಿದಂತೆ ಕೆಲವು ಪ್ರಮುಖ ತೀರ್ಪುಗಳ ಬಗ್ಗೆ ಮಾತನಾಡುತ್ತೇನೆ, ನಮ್ಮ ಪ್ರಜಾಸತ್ತಾತ್ಮಕ ಸಮಾಜದ ಅಡಿಪಾಯವನ್ನು ಸುಪ್ರೀಂಕೋರ್ಟ್‌ ಹೇಗೆ ಬಲಪಡಿಸಿದೆ ಎಂಬುದರ ಕುರಿತು ನಾನು ಮಾತನಾಡುತ್ತೇನೆ. ಕೋವಿಡ್-19 2020ರ ಹಿನ್ನೆಲೆಯೊಂದಿಗೆ ನಾನು ಪ್ರಾರಂಭಿಸುತ್ತೇನೆ, ಲಾಕ್‌ಡೌನ್‌ನಿಂದಾಗಿ ಸುಪ್ರೀಂಕೋರ್ಟ್‌ ಮತ್ತು ಇತರ ನ್ಯಾಯಾಲಯಗಳಲ್ಲಿನ ವಿಚಾರಣೆಗಳು ಕಡಿಮೆಯಾದವು ಮತ್ತು ವಿಚಾರಣೆಗಳನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನಡೆಸಲಾಗುತ್ತಿತ್ತು. ಸಾಂಕ್ರಾಮಿಕ ರೋಗದ ನಂತರ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಯುಯು ಲಲಿತ್  ಅವರು ಎಸ್‌ಸಿಯ ಕೆಲಸವನ್ನು ಶ್ರದ್ಧೆಯಿಂದ ಮುನ್ನಡೆಸಿದರು. ಅವರು ದೀರ್ಘಕಾಲ ಬಾಕಿ ಇರುವ ಪ್ರಕರಣಗಳನ್ನು ಸುಧಾರಿಸಲು ಮತ್ತು ವಿಲೇವಾರಿ ಮಾಡಲು ನಿರ್ಧರಿಸಿದರು ಮತ್ತು ಆದ್ದರಿಂದ, ಅವರು 5-ಸಂವಿಧಾನ ಪೀಠಗಳನ್ನು ಸ್ಥಾಪಿಸಿದರು. ತೀರಾ ಇತ್ತೀಚೆಗೆ ಹೈಕೋರ್ಟ್‌ಗೆ ಸೇರಿದ್ದ ನನ್ನನ್ನೂ ಒಳಗೊಂಡಂತೆ ಸುಪ್ರೀಂಕೋರ್ಟ್‌ನ ಎಲ್ಲಾ 30 ನ್ಯಾಯಾಧೀಶರಿಗೆ ಸಂವಿಧಾನ ಪೀಠದಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರ

ಸಾಂವಿಧಾನಿಕ ಪೀಠಗಳು ಕಾನೂನು ವ್ಯಾಪ್ತಿಗೆ ಒಳಪಡುವ 25 ದೀರ್ಘ ಬಾಕಿ ಪ್ರಕರಣಗಳನ್ನು ಕೈಗೆತ್ತಿಕೊಂಡವು. ವಿವೇಕ್ ನಾರಾಯಣ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ 2023ರ ಪ್ರಕರಣವನ್ನು ಎಲ್ಲರೂ ಓದಲೇಬೇಕು. ಇದು ನೋಟು ಅಮಾನ್ಯೀಕರಣ ಕೇಸ್ ಎಂದು ಜನಪ್ರಿಯವಾಗಿದೆ, ಆ ಪೀಠದ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 8, 2016ರಂದು 500 ಮತ್ತು 1000 ರೂಪಾಯಿ ನೋಟುಗಳನ್ನು ನಿಷೇಧ  ಮಾಡಿದಾಗ ಏನಾಯಿತು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕುತೂಹಲಕಾರಿ ಅಂಶವೆಂದರೆ ಆ ಕಾಲದ ಭಾರತೀಯ ಆರ್ಥಿಕತೆಯಲ್ಲಿ 86% ಕರೆನ್ಸಿಯು 500 ಮತ್ತು 1,000 ರೂಪಾಯಿ ನೋಟುಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

86% ರಷ್ಟು ಕರೆನ್ಸಿಯು 500 ಮತ್ತು 1,000 ನೋಟುಗಳಾಗಿದ್ದು, ಆ ದಿನಗಳಲ್ಲಿ ಕೆಲಸಕ್ಕೆ ಹೋದ ಒಬ್ಬ ಕಾರ್ಮಿಕನು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿಗೆ ಹೋಗುವ ಮೊದಲು ತನ್ನ ನೋಟುಗಳನ್ನು ಬದಲಾಯಿಸಿಕೊಳ್ಳಬೇಕಾಗಿತ್ತು ಎಂದು ಊಹಿಸಿಕೊಳ್ಳಿ. 98% ಕರೆನ್ಸಿ ಆರ್‌ಬಿಐಗೆ ಮರಳಿದೆ, ಹಾಗಾದರೆ ನೋಟು ರದ್ದತಿಯ ಗುರಿ ಏನು ಎಂದು ಪ್ರಶ್ನಿಸಿದ್ದಾರೆ.

ಕಪ್ಪುಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸಲು ಇದು ಉತ್ತಮ ಮಾರ್ಗ ಎಂದು ನಾನು ಭಾವಿಸಿದ್ದೆ. ಅದರ ನಂತರ ಆದಾಯ ತೆರಿಗೆ ಪ್ರಕ್ರಿಯೆಗಳ ಬಗ್ಗೆ ಏನಾಯಿತು ಎಂದು ನಮಗೆ ಗೊತ್ತಿಲ್ಲ. ಆದ್ದರಿಂದ, ಸಾಮಾನ್ಯ ಮನುಷ್ಯನ ಸಂಕಟವು ನಿಜವಾಗಿಯೂ ನನ್ನನ್ನು ಚಿಂತಗೀಡು ಮಾಡಿತ್ತು, ಅದೇ ಕಾರಣಕ್ಕೆ ‘ವಿವೇಕ್ ನಾರಾಯಣ ಶರ್ಮಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ’ ನಾನು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...