Homeಮುಖಪುಟಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

- Advertisement -
- Advertisement -

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌‌ ನ್ಯಾಯಾಮೂರ್ತಿಯೊಬ್ಬರು ಅರ್ಜಿದಾರನೊಂದಿಗೆ ಕನ್ನಡದಲ್ಲಿ ಮಾತನಾಡಿರುವುದು ಇದೀಗ ಸುದ್ದಿಯಾಗಿದೆ.

ವರ್ಚುವಲ್ ವಿಚಾರಣೆ ವೇಳೆ ಕಾಣಿಸಿಕೊಂಡ ದಾವೆದಾರನಿಗೆ ಭಾರತೀಯ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌ವಿ ರಮಣ “ನೀವು ಇಂಗ್ಲಿಷ್‌ನಲ್ಲಿ ಮಾತನಾಡುತ್ತೀರಾ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅರ್ಜಿದಾರ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವೇಳೆ, “ಸರಿ ಸಹೋದರ, ಕನ್ನಡದಲ್ಲಿ ಮಾತನಾಡೋಣ್ವಾ” ಎಂದು ಎನ್‌ವಿ ರಮಣ ಕೇಳಿದ್ದಾರೆ. ನಂತರ ಪಕ್ಕದಲ್ಲೇ ಇದ್ದ ಕರ್ನಾಟಕ ಮೂಲದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಸಂವಹನ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಬೋಪಣ್ಣ ಅವರು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಮಾತುಕತೆ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಭೌತಿಕವಾಗಿ ವಿಚಾರಣೆ ವೇಳೆ ಕೂಡಾ ಕನ್ನಡದಲ್ಲಿ ಮುಂದುವರಿಯಲಿ. ನಾವು ಇದನ್ನು ಕೇಳುತ್ತೇವೆಂದು ಮುಖ್ಯನ್ಯಾಯಮೂರ್ತಿ ರಮಣ ಅವರು ಹೇಳಿದ್ದಾರೆ. ಈ ವರ್ಚುವಲ್‌ ವಿಚಾರಣೆಯ ಸಂಭಾಷಣೆಯ ವಿವರವನ್ನು ಬಾರ್‌ ಅಂಡ್‌ ಬೆಂಚ್‌ ವೆಬ್‌ತಾಣ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

ಈ ಪ್ರಕರಣದಿಂದ ಇತ್ತೀಚೆಗೆ ಸ್ಥಳೀಯ ಭಾಷೆಗೆ ನ್ಯಾಯಾಲಯದಲ್ಲಿ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿರುವುದು ಸ್ಪಷ್ಟವಾಗಿದೆ. ಪ್ರಕರಣಗಳ ವಿಚಾರಣೆ ಹಾಗೂ ತೀರ್ಪು ನೀಡುವ ವಿಚಾರದಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯ ನ್ಯಾಯಾಧೀಶರ ನೆರವನ್ನು ಪಡೆದು ವಿಚಾರಣೆ ನಡೆಸುವ ಮೂಲಕ ಹೆಚ್ಚು ಉತ್ತಮವಾಗಿ ಪ್ರಕರಣವನ್ನು ಅರ್ಥಮಾಡಿಕೊಳ್ಳಲು ಸುಪ್ರೀಕೋರ್ಟ್‌ ಪ್ರಯತ್ನಿಸಿದೆ. ಹೀಗಾಗಿ ಕಕ್ಷಿದಾರರಿಗೆ ಸಹ ವಿಚಾರಣೆಯನ್ನು ಅರ್ಥ ಮಾಡಿಕೊಳ್ಳಲು ಅವಕಾಶ ದೊರೆತಿದೆ.

ಟ್ವಿಟರ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಎಂಬವರು, “ಸುಪ್ರೀಂಕೋರ್ಟ್‌ನ ನಡೆಯಿಂದ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಸುವ ವಕೀಲರಿಗೆ ಸಹಾಯವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ತತ್ವಿರುದ್ಧ ಪ್ರಕರಣವೊಂದರ ವಿಚಾರಣೆಯೊಂದರಲ್ಲಿ ಕನ್ನಡದ ನ್ಯಾಯಾಧೀಶರೊಬ್ಬರು ಅರ್ಜಿದಾರ ಗುಜರಾತಿ ಭಾಷೆಯಲ್ಲೇ ಮಾತನಾಡುತ್ತೇನೆಂದು ಹಠ ಹಿಡಿದಾಗ ಸಿಟ್ಟಾಗಿದ್ದರು. ಅರ್ಜಿದಾರ ಗುಜರಾತಿ ಭಾಷೆಯಲ್ಲಿ ಮಾತನಾಡಿದಾಗ ನ್ಯಾಯಾಧೀಶರು ಆತನಿಗೆ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡಲು ಸೂಚಿಸಿದ್ದರು. ಭಾಷೆ ಇಲ್ಲಿ ಸಮಸ್ಯೆಯಾಯಿತು.

ಅರ್ಜಿದಾರ ಗುಜರಾತಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದರು. ಅದಕ್ಕೆ ಉತ್ತರವಾಗಿ ನ್ಯಾಯಾಧೀಶರು, “ಹಾಗಿದ್ದರೆ ನಾನು ಕನ್ನಡದಲ್ಲಿ ಮಾತನಾಡಿದರೆ ಹೇಗಿರುತ್ತದೆ” ಎಂದು ಪ್ರಶ್ನಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗೆ ಕೆಲವೊಮ್ಮೆ ಸ್ಥಳೀಯ ಭಾಷೆಗಳು ವಿಚಾರಣೆಗೆ ತೊಡಕಾದರೆ, ಇನ್ನು ಕೆಲವೊಮ್ಮೆ ಸ್ಥಳೀಯ ಭಾಷೆ ಪ್ರಕರಣವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಪಕ್ಷಗಳು ನೀಡುವ ’ಉಚಿತಗಳ’ ಭರವಸೆ ಗಂಭೀರ ಸಮಸ್ಯೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...