Homeಮುಖಪುಟಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

- Advertisement -
- Advertisement -

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌‌ ನ್ಯಾಯಾಮೂರ್ತಿಯೊಬ್ಬರು ಅರ್ಜಿದಾರನೊಂದಿಗೆ ಕನ್ನಡದಲ್ಲಿ ಮಾತನಾಡಿರುವುದು ಇದೀಗ ಸುದ್ದಿಯಾಗಿದೆ.

ವರ್ಚುವಲ್ ವಿಚಾರಣೆ ವೇಳೆ ಕಾಣಿಸಿಕೊಂಡ ದಾವೆದಾರನಿಗೆ ಭಾರತೀಯ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌ವಿ ರಮಣ “ನೀವು ಇಂಗ್ಲಿಷ್‌ನಲ್ಲಿ ಮಾತನಾಡುತ್ತೀರಾ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅರ್ಜಿದಾರ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವೇಳೆ, “ಸರಿ ಸಹೋದರ, ಕನ್ನಡದಲ್ಲಿ ಮಾತನಾಡೋಣ್ವಾ” ಎಂದು ಎನ್‌ವಿ ರಮಣ ಕೇಳಿದ್ದಾರೆ. ನಂತರ ಪಕ್ಕದಲ್ಲೇ ಇದ್ದ ಕರ್ನಾಟಕ ಮೂಲದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಸಂವಹನ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಬೋಪಣ್ಣ ಅವರು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಮಾತುಕತೆ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಭೌತಿಕವಾಗಿ ವಿಚಾರಣೆ ವೇಳೆ ಕೂಡಾ ಕನ್ನಡದಲ್ಲಿ ಮುಂದುವರಿಯಲಿ. ನಾವು ಇದನ್ನು ಕೇಳುತ್ತೇವೆಂದು ಮುಖ್ಯನ್ಯಾಯಮೂರ್ತಿ ರಮಣ ಅವರು ಹೇಳಿದ್ದಾರೆ. ಈ ವರ್ಚುವಲ್‌ ವಿಚಾರಣೆಯ ಸಂಭಾಷಣೆಯ ವಿವರವನ್ನು ಬಾರ್‌ ಅಂಡ್‌ ಬೆಂಚ್‌ ವೆಬ್‌ತಾಣ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

ಈ ಪ್ರಕರಣದಿಂದ ಇತ್ತೀಚೆಗೆ ಸ್ಥಳೀಯ ಭಾಷೆಗೆ ನ್ಯಾಯಾಲಯದಲ್ಲಿ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿರುವುದು ಸ್ಪಷ್ಟವಾಗಿದೆ. ಪ್ರಕರಣಗಳ ವಿಚಾರಣೆ ಹಾಗೂ ತೀರ್ಪು ನೀಡುವ ವಿಚಾರದಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯ ನ್ಯಾಯಾಧೀಶರ ನೆರವನ್ನು ಪಡೆದು ವಿಚಾರಣೆ ನಡೆಸುವ ಮೂಲಕ ಹೆಚ್ಚು ಉತ್ತಮವಾಗಿ ಪ್ರಕರಣವನ್ನು ಅರ್ಥಮಾಡಿಕೊಳ್ಳಲು ಸುಪ್ರೀಕೋರ್ಟ್‌ ಪ್ರಯತ್ನಿಸಿದೆ. ಹೀಗಾಗಿ ಕಕ್ಷಿದಾರರಿಗೆ ಸಹ ವಿಚಾರಣೆಯನ್ನು ಅರ್ಥ ಮಾಡಿಕೊಳ್ಳಲು ಅವಕಾಶ ದೊರೆತಿದೆ.

ಟ್ವಿಟರ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಎಂಬವರು, “ಸುಪ್ರೀಂಕೋರ್ಟ್‌ನ ನಡೆಯಿಂದ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಸುವ ವಕೀಲರಿಗೆ ಸಹಾಯವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ತತ್ವಿರುದ್ಧ ಪ್ರಕರಣವೊಂದರ ವಿಚಾರಣೆಯೊಂದರಲ್ಲಿ ಕನ್ನಡದ ನ್ಯಾಯಾಧೀಶರೊಬ್ಬರು ಅರ್ಜಿದಾರ ಗುಜರಾತಿ ಭಾಷೆಯಲ್ಲೇ ಮಾತನಾಡುತ್ತೇನೆಂದು ಹಠ ಹಿಡಿದಾಗ ಸಿಟ್ಟಾಗಿದ್ದರು. ಅರ್ಜಿದಾರ ಗುಜರಾತಿ ಭಾಷೆಯಲ್ಲಿ ಮಾತನಾಡಿದಾಗ ನ್ಯಾಯಾಧೀಶರು ಆತನಿಗೆ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡಲು ಸೂಚಿಸಿದ್ದರು. ಭಾಷೆ ಇಲ್ಲಿ ಸಮಸ್ಯೆಯಾಯಿತು.

ಅರ್ಜಿದಾರ ಗುಜರಾತಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದರು. ಅದಕ್ಕೆ ಉತ್ತರವಾಗಿ ನ್ಯಾಯಾಧೀಶರು, “ಹಾಗಿದ್ದರೆ ನಾನು ಕನ್ನಡದಲ್ಲಿ ಮಾತನಾಡಿದರೆ ಹೇಗಿರುತ್ತದೆ” ಎಂದು ಪ್ರಶ್ನಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗೆ ಕೆಲವೊಮ್ಮೆ ಸ್ಥಳೀಯ ಭಾಷೆಗಳು ವಿಚಾರಣೆಗೆ ತೊಡಕಾದರೆ, ಇನ್ನು ಕೆಲವೊಮ್ಮೆ ಸ್ಥಳೀಯ ಭಾಷೆ ಪ್ರಕರಣವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಪಕ್ಷಗಳು ನೀಡುವ ’ಉಚಿತಗಳ’ ಭರವಸೆ ಗಂಭೀರ ಸಮಸ್ಯೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...