Homeಮುಖಪುಟಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಕನ್ನಡದಲ್ಲಿ ಮಾತನಾಡಲು ಅರ್ಜಿದಾರನನ್ನು ಹುರಿದುಂಬಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

- Advertisement -
- Advertisement -

ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌‌ ನ್ಯಾಯಾಮೂರ್ತಿಯೊಬ್ಬರು ಅರ್ಜಿದಾರನೊಂದಿಗೆ ಕನ್ನಡದಲ್ಲಿ ಮಾತನಾಡಿರುವುದು ಇದೀಗ ಸುದ್ದಿಯಾಗಿದೆ.

ವರ್ಚುವಲ್ ವಿಚಾರಣೆ ವೇಳೆ ಕಾಣಿಸಿಕೊಂಡ ದಾವೆದಾರನಿಗೆ ಭಾರತೀಯ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌ವಿ ರಮಣ “ನೀವು ಇಂಗ್ಲಿಷ್‌ನಲ್ಲಿ ಮಾತನಾಡುತ್ತೀರಾ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಅರ್ಜಿದಾರ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವೇಳೆ, “ಸರಿ ಸಹೋದರ, ಕನ್ನಡದಲ್ಲಿ ಮಾತನಾಡೋಣ್ವಾ” ಎಂದು ಎನ್‌ವಿ ರಮಣ ಕೇಳಿದ್ದಾರೆ. ನಂತರ ಪಕ್ಕದಲ್ಲೇ ಇದ್ದ ಕರ್ನಾಟಕ ಮೂಲದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಸಂವಹನ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಬೋಪಣ್ಣ ಅವರು ಅರ್ಜಿದಾರನ ಜೊತೆಗೆ ಕನ್ನಡದಲ್ಲಿ ಮಾತುಕತೆ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಭೌತಿಕವಾಗಿ ವಿಚಾರಣೆ ವೇಳೆ ಕೂಡಾ ಕನ್ನಡದಲ್ಲಿ ಮುಂದುವರಿಯಲಿ. ನಾವು ಇದನ್ನು ಕೇಳುತ್ತೇವೆಂದು ಮುಖ್ಯನ್ಯಾಯಮೂರ್ತಿ ರಮಣ ಅವರು ಹೇಳಿದ್ದಾರೆ. ಈ ವರ್ಚುವಲ್‌ ವಿಚಾರಣೆಯ ಸಂಭಾಷಣೆಯ ವಿವರವನ್ನು ಬಾರ್‌ ಅಂಡ್‌ ಬೆಂಚ್‌ ವೆಬ್‌ತಾಣ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

ಈ ಪ್ರಕರಣದಿಂದ ಇತ್ತೀಚೆಗೆ ಸ್ಥಳೀಯ ಭಾಷೆಗೆ ನ್ಯಾಯಾಲಯದಲ್ಲಿ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿರುವುದು ಸ್ಪಷ್ಟವಾಗಿದೆ. ಪ್ರಕರಣಗಳ ವಿಚಾರಣೆ ಹಾಗೂ ತೀರ್ಪು ನೀಡುವ ವಿಚಾರದಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯ ನ್ಯಾಯಾಧೀಶರ ನೆರವನ್ನು ಪಡೆದು ವಿಚಾರಣೆ ನಡೆಸುವ ಮೂಲಕ ಹೆಚ್ಚು ಉತ್ತಮವಾಗಿ ಪ್ರಕರಣವನ್ನು ಅರ್ಥಮಾಡಿಕೊಳ್ಳಲು ಸುಪ್ರೀಕೋರ್ಟ್‌ ಪ್ರಯತ್ನಿಸಿದೆ. ಹೀಗಾಗಿ ಕಕ್ಷಿದಾರರಿಗೆ ಸಹ ವಿಚಾರಣೆಯನ್ನು ಅರ್ಥ ಮಾಡಿಕೊಳ್ಳಲು ಅವಕಾಶ ದೊರೆತಿದೆ.

ಟ್ವಿಟರ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಎಂಬವರು, “ಸುಪ್ರೀಂಕೋರ್ಟ್‌ನ ನಡೆಯಿಂದ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಬಳಸುವ ವಕೀಲರಿಗೆ ಸಹಾಯವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ತತ್ವಿರುದ್ಧ ಪ್ರಕರಣವೊಂದರ ವಿಚಾರಣೆಯೊಂದರಲ್ಲಿ ಕನ್ನಡದ ನ್ಯಾಯಾಧೀಶರೊಬ್ಬರು ಅರ್ಜಿದಾರ ಗುಜರಾತಿ ಭಾಷೆಯಲ್ಲೇ ಮಾತನಾಡುತ್ತೇನೆಂದು ಹಠ ಹಿಡಿದಾಗ ಸಿಟ್ಟಾಗಿದ್ದರು. ಅರ್ಜಿದಾರ ಗುಜರಾತಿ ಭಾಷೆಯಲ್ಲಿ ಮಾತನಾಡಿದಾಗ ನ್ಯಾಯಾಧೀಶರು ಆತನಿಗೆ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡಲು ಸೂಚಿಸಿದ್ದರು. ಭಾಷೆ ಇಲ್ಲಿ ಸಮಸ್ಯೆಯಾಯಿತು.

ಅರ್ಜಿದಾರ ಗುಜರಾತಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದರು. ಅದಕ್ಕೆ ಉತ್ತರವಾಗಿ ನ್ಯಾಯಾಧೀಶರು, “ಹಾಗಿದ್ದರೆ ನಾನು ಕನ್ನಡದಲ್ಲಿ ಮಾತನಾಡಿದರೆ ಹೇಗಿರುತ್ತದೆ” ಎಂದು ಪ್ರಶ್ನಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗೆ ಕೆಲವೊಮ್ಮೆ ಸ್ಥಳೀಯ ಭಾಷೆಗಳು ವಿಚಾರಣೆಗೆ ತೊಡಕಾದರೆ, ಇನ್ನು ಕೆಲವೊಮ್ಮೆ ಸ್ಥಳೀಯ ಭಾಷೆ ಪ್ರಕರಣವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಪಕ್ಷಗಳು ನೀಡುವ ’ಉಚಿತಗಳ’ ಭರವಸೆ ಗಂಭೀರ ಸಮಸ್ಯೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...