Homeಮುಖಪುಟ'ಎಲ್ಲಾ ಮಹಿಳೆಯರ ಗೆಲುವು': ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರತಿಕ್ರಿಯಿಸಿದ್ದು, ಇದು ನಮ್ಮೆಲ್ಲಾ ಮಹಿಳೆಯರ ಗೆಲುವು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಕುಸ್ತಿಪಟು ವಿನೇಶ್ ಫೋಗಟ್, ಬಿಲ್ಕಿಸ್ ಜೀ, ಇದು ನಮ್ಮೆಲ್ಲ ಮಹಿಳೆಯರ ಗೆಲುವು. ನೀವು ಸುದೀರ್ಘ ಹೋರಾಟ ನಡೆಸಿದ್ದೀರಿ. ನಿಮ್ಮ ಪ್ರಯಾಣವನ್ನು ನೋಡಿ ನಾವು ಧೈರ್ಯವನ್ನು ತೆಗೆದುಕೊಳ್ಳುತ್ತೇವೆ ಎಂದು ಫೋಗಟ್ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಳೆದ ವರ್ಷ  ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯಲ್ಲಿ ವಿನೇಶ್ ಫೋಗಟ್ ಕೂಡ ಸೇರಿದ್ದಾರೆ. ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು, ಹಾಗೆಯೇ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಸರನ್ನು ಗಳಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್‌ನ್ನು ಕುಸ್ತಿ ಫೆಡರೇಶನ್‌ ಮುಖ್ಯಸ್ಥನಾಗಿ ಆಯ್ಕೆ ವಿರುದ್ಧದ ಪ್ರತಿಭಟನೆಯ ಭಾಗವಾಗಿ ತನ್ನ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದರು. ಬಳಿಕ ವಿನೇಶ್ ಫೋಗಟ್‌ ಡಿ.30ರಂದು ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೆರಳಿದ್ದರು.

2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ ಬಾನು ಅವರನ್ನು ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಕೆಯ ಕುಟುಂಬದ 14 ಮಂದಿ ಸದಸ್ಯರನ್ನು ಕೊಲೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಸಾಮೂಹಿಕ ಹತ್ಯೆಯ ಅಪರಾಧ ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದ ಹನ್ನೊಂದು ಜನರನ್ನು 2022ರಲ್ಲಿ ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ ಬಿಡುಗಡೆ ಮಾಡಿತ್ತು. ಆದರೆ ಸುಪ್ರೀಂಕೋರ್ಟ್ ಸೋಮವಾರ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗೊಳಿಸಿ ಅಪರಾಧಿಗಳಿಗೆ ಮತ್ತೆ ಕೋರ್ಟ್‌ಗೆ ಶರಣಾಗುವಂತೆ ಆದೇಶಿಸಿದೆ.

ಈ ತೀರ್ಪಿನ ಬಗ್ಗೆ ತಮ್ಮ ವಕೀಲೆ ಶೋಭಾ ಗುಪ್ತಾ ಮೂಲಕ ಬಿಲ್ಕಿಸ್ ಬಾನು ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ಇಂದು ನನಗೆ ನಿಜವಾಗಿಯೂ ಹೊಸ ವರ್ಷ, ಸುಪ್ರೀಂಕೋರ್ಟ್ ತೀರ್ಪಿಗೆ ಧನ್ಯವಾದಗಳು. ನಾನು ಸಮಾಧಾನದಿಂದ ಕಣ್ಣೀರು ಹಾಕಿದೆ. ಒಂದೂವರೆ ವರ್ಷದಲ್ಲಿ ನಾನು ಮೊದಲ ಬಾರಿಗೆ ನಗುತ್ತಿದ್ದೇನೆ. ನಾನು ನನ್ನ ಮಕ್ಕಳನ್ನು ತಬ್ಬಿಕೊಂಡಿದ್ದೇನೆ. ನನ್ನ ಎದೆಯಿಂದ ಪರ್ವತದ ಗಾತ್ರದ ಕಲ್ಲು ಎತ್ತಲ್ಪಟ್ಟಂತೆ ಭಾಸವಾಗುತ್ತಿದೆ. ನಾನು ಈಗ ಮತ್ತೆ ಉಸಿರಾಡುತ್ತೇನೆ. ಇದು ನ್ಯಾಯ ಅನ್ನಿಸುತ್ತದೆ. ನನಗೆ, ನನ್ನ ಮಕ್ಕಳು ಮತ್ತು ಎಲ್ಲಾ ಮಹಿಳೆಯರಿಗೆ ಈ ನ್ಯಾಯ ನೀಡಿದ್ದಕ್ಕಾಗಿ ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್‌ಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

ಕಳೆದ 20 ವರ್ಷಗಳಿಂದ ನನಗೆ ಬೆಂಬಲವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ಪರವಾಗಿ ನಿಂತಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ವಕೀಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಮೊದಲೇ ಹೇಳಿದ್ದೇನೆ ಮತ್ತು ನಾನು ಇಂದು ಮತ್ತೆ ಹೇಳುತ್ತೇನೆ, ನನ್ನಂತಹ ಮಹಿಳೆಯ ಪ್ರಯಾಣ ಎಂದಿಗೂ ಏಕಾಂಗಿಯಾಗಿ ಸಾಧ್ಯವಿಲ್ಲ. ನನ್ನ ಪಕ್ಕದಲ್ಲಿ ನನ್ನ ಪತಿ ಮತ್ತು ಮಕ್ಕಳಿದ್ದಾರೆ. ದ್ವೇಷದ ಸಮಯದಲ್ಲಿ ನನಗೆ ತುಂಬಾ ಪ್ರೀತಿಯನ್ನು ನೀಡಿದ ನನ್ನ ಸ್ನೇಹಿತರಿದ್ದಾರೆ. ಪ್ರತಿ ಕಷ್ಟದ ಸಮಯದಲ್ಲಿ ನನ್ನ ಕೈಯನ್ನು ಹಿಡಿದಿದ್ದಾರೆ. ನನ್ನ ವಕೀಲರದ್ದು ಅಸಾಧಾರಣ ವ್ಯಕ್ತಿತ್ವ, ವಕೀಲೆ ಶೋಭಾ ಗುಪ್ತಾ ಅವರು 20 ವರ್ಷಗಳಿಂದ ನನ್ನೊಂದಿಗೆ ಅಚಲವಾಗಿ ನಿಂತುಕೊಂಡಿದ್ದಾರೆ ಮತ್ತು ನ್ಯಾಯದ ಹೋರಾಟದಲ್ಲಿ ಭರವಸೆ ಕಳೆದುಕೊಳ್ಳಲು ನನಗೆ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...