Homeಮುಖಪುಟ'ಎಲ್ಲಾ ಮಹಿಳೆಯರ ಗೆಲುವು': ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರತಿಕ್ರಿಯಿಸಿದ್ದು, ಇದು ನಮ್ಮೆಲ್ಲಾ ಮಹಿಳೆಯರ ಗೆಲುವು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಕುಸ್ತಿಪಟು ವಿನೇಶ್ ಫೋಗಟ್, ಬಿಲ್ಕಿಸ್ ಜೀ, ಇದು ನಮ್ಮೆಲ್ಲ ಮಹಿಳೆಯರ ಗೆಲುವು. ನೀವು ಸುದೀರ್ಘ ಹೋರಾಟ ನಡೆಸಿದ್ದೀರಿ. ನಿಮ್ಮ ಪ್ರಯಾಣವನ್ನು ನೋಡಿ ನಾವು ಧೈರ್ಯವನ್ನು ತೆಗೆದುಕೊಳ್ಳುತ್ತೇವೆ ಎಂದು ಫೋಗಟ್ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಳೆದ ವರ್ಷ  ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯಲ್ಲಿ ವಿನೇಶ್ ಫೋಗಟ್ ಕೂಡ ಸೇರಿದ್ದಾರೆ. ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು, ಹಾಗೆಯೇ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಸರನ್ನು ಗಳಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್‌ನ್ನು ಕುಸ್ತಿ ಫೆಡರೇಶನ್‌ ಮುಖ್ಯಸ್ಥನಾಗಿ ಆಯ್ಕೆ ವಿರುದ್ಧದ ಪ್ರತಿಭಟನೆಯ ಭಾಗವಾಗಿ ತನ್ನ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದರು. ಬಳಿಕ ವಿನೇಶ್ ಫೋಗಟ್‌ ಡಿ.30ರಂದು ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೆರಳಿದ್ದರು.

2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ ಬಾನು ಅವರನ್ನು ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಕೆಯ ಕುಟುಂಬದ 14 ಮಂದಿ ಸದಸ್ಯರನ್ನು ಕೊಲೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಸಾಮೂಹಿಕ ಹತ್ಯೆಯ ಅಪರಾಧ ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದ ಹನ್ನೊಂದು ಜನರನ್ನು 2022ರಲ್ಲಿ ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ ಬಿಡುಗಡೆ ಮಾಡಿತ್ತು. ಆದರೆ ಸುಪ್ರೀಂಕೋರ್ಟ್ ಸೋಮವಾರ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗೊಳಿಸಿ ಅಪರಾಧಿಗಳಿಗೆ ಮತ್ತೆ ಕೋರ್ಟ್‌ಗೆ ಶರಣಾಗುವಂತೆ ಆದೇಶಿಸಿದೆ.

ಈ ತೀರ್ಪಿನ ಬಗ್ಗೆ ತಮ್ಮ ವಕೀಲೆ ಶೋಭಾ ಗುಪ್ತಾ ಮೂಲಕ ಬಿಲ್ಕಿಸ್ ಬಾನು ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ಇಂದು ನನಗೆ ನಿಜವಾಗಿಯೂ ಹೊಸ ವರ್ಷ, ಸುಪ್ರೀಂಕೋರ್ಟ್ ತೀರ್ಪಿಗೆ ಧನ್ಯವಾದಗಳು. ನಾನು ಸಮಾಧಾನದಿಂದ ಕಣ್ಣೀರು ಹಾಕಿದೆ. ಒಂದೂವರೆ ವರ್ಷದಲ್ಲಿ ನಾನು ಮೊದಲ ಬಾರಿಗೆ ನಗುತ್ತಿದ್ದೇನೆ. ನಾನು ನನ್ನ ಮಕ್ಕಳನ್ನು ತಬ್ಬಿಕೊಂಡಿದ್ದೇನೆ. ನನ್ನ ಎದೆಯಿಂದ ಪರ್ವತದ ಗಾತ್ರದ ಕಲ್ಲು ಎತ್ತಲ್ಪಟ್ಟಂತೆ ಭಾಸವಾಗುತ್ತಿದೆ. ನಾನು ಈಗ ಮತ್ತೆ ಉಸಿರಾಡುತ್ತೇನೆ. ಇದು ನ್ಯಾಯ ಅನ್ನಿಸುತ್ತದೆ. ನನಗೆ, ನನ್ನ ಮಕ್ಕಳು ಮತ್ತು ಎಲ್ಲಾ ಮಹಿಳೆಯರಿಗೆ ಈ ನ್ಯಾಯ ನೀಡಿದ್ದಕ್ಕಾಗಿ ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್‌ಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

ಕಳೆದ 20 ವರ್ಷಗಳಿಂದ ನನಗೆ ಬೆಂಬಲವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ಪರವಾಗಿ ನಿಂತಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ವಕೀಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಮೊದಲೇ ಹೇಳಿದ್ದೇನೆ ಮತ್ತು ನಾನು ಇಂದು ಮತ್ತೆ ಹೇಳುತ್ತೇನೆ, ನನ್ನಂತಹ ಮಹಿಳೆಯ ಪ್ರಯಾಣ ಎಂದಿಗೂ ಏಕಾಂಗಿಯಾಗಿ ಸಾಧ್ಯವಿಲ್ಲ. ನನ್ನ ಪಕ್ಕದಲ್ಲಿ ನನ್ನ ಪತಿ ಮತ್ತು ಮಕ್ಕಳಿದ್ದಾರೆ. ದ್ವೇಷದ ಸಮಯದಲ್ಲಿ ನನಗೆ ತುಂಬಾ ಪ್ರೀತಿಯನ್ನು ನೀಡಿದ ನನ್ನ ಸ್ನೇಹಿತರಿದ್ದಾರೆ. ಪ್ರತಿ ಕಷ್ಟದ ಸಮಯದಲ್ಲಿ ನನ್ನ ಕೈಯನ್ನು ಹಿಡಿದಿದ್ದಾರೆ. ನನ್ನ ವಕೀಲರದ್ದು ಅಸಾಧಾರಣ ವ್ಯಕ್ತಿತ್ವ, ವಕೀಲೆ ಶೋಭಾ ಗುಪ್ತಾ ಅವರು 20 ವರ್ಷಗಳಿಂದ ನನ್ನೊಂದಿಗೆ ಅಚಲವಾಗಿ ನಿಂತುಕೊಂಡಿದ್ದಾರೆ ಮತ್ತು ನ್ಯಾಯದ ಹೋರಾಟದಲ್ಲಿ ಭರವಸೆ ಕಳೆದುಕೊಳ್ಳಲು ನನಗೆ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...