Homeಮುಖಪುಟಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

- Advertisement -
- Advertisement -

ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ನ್ಯಾಯಾಧೀಶರು ಹಂಚಿಕೊಳ್ಳುವ ಆಸ್ತಿ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ದೆಹಲಿ ಹೈಕೋರ್ಟ್‌ನಿಂದ ಮೂಲಸ್ಥಾನ ಅಲಹಾಬಾದ್‌ ಹೈಕೋರ್ಟ್‌ಗೆ ಇತ್ತೀಚೆಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಸರ್ಕಾರಿ ನಿವಾಸದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ.

ನ್ಯಾಯಾಧೀಶರ ಆಸ್ತಿ ಘೋಷಣೆ ಹೇಗೆ ಮಾಡಬೇಕು ಎಂಬುದಕ್ಕೆ ನಿರ್ದಿಷ್ಟ ವಿಧಾನಗಳನ್ನು ಸರಿಯಾದ ಸಮಯದಲ್ಲಿ ಅಂತಿಮಗೊಳಿಸಲಾಗುತ್ತದೆ ಎಂದು ವರದಿ ಹೇಳಿದೆ.

ಪ್ರಸ್ತುತ, ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಘೋಷಿಸಿಕೊಂಡಿದ್ದಾರೆ. ಆದರೆ, ಅದನ್ನು ಸಾರ್ವಜನಿಕಗೊಳಿಸಿಲ್ಲ.

ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ

ನ್ಯಾಯಮೂರ್ತಿ ಯಶವಂತ್ ವರ್ಮಾ ಊರಲ್ಲಿ ಇಲ್ಲದ ವೇಳೆ, ಮಾರ್ಚ್ 14 ರಂದು ಬೆಳಿಗ್ಗೆ 11.30ಕ್ಕೆ ದೆಹಲಿಯ ನ್ಯಾಯಾಂಗ ಬಡಾವಣೆಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕುಟುಂಬಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಮನೆಯ ಒಂದು ಕೋಣೆಯಲ್ಲಿ ಪೊಲೀಸರಿಗೆ ಭಾರೀ ಪ್ರಮಾಣದ ಹಣ ಕಂಡು ಬಂದಿತ್ತು. 

ಈ ಬಗ್ಗೆ ಸ್ಥಳೀಯ ಪೊಲೀಸರು ಅವರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅವರು ಹಿರಿಯ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಮಾಹಿತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ತಲುಪಿತ್ತು. ಅವರು ಗುರುವಾರ (ಮಾ.20) ಸಂಜೆ ತುರ್ತು ಕೊಲಿಜಿಯಂ ಸಭೆ ಕರೆದಿದ್ದರು. ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಿತ್ತು.

ನ್ಯಾಯಮೂರ್ತಿ ವರ್ಮಾ ಅವರನ್ನು ಪ್ರಸ್ತುತ ಅವರ ಮೂಲ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಅವರ ವಿರುದ್ದ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್‌ ವಕೀಲರು ವರ್ಮಾ ಅವರನ್ನು ನಮಲ್ಲಿಗೆ ಕಳುಹಿಸಬೇಡಿ ಎಂದು ಇತ್ತೀಚೆಗೆ ಪ್ರತಿಭಟಿಸಿದ್ದರು. ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಇದು ಜನರಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸಾರ್ಹತೆಯನ್ನು ಕಡಿಮೆ ಮಾಡುತ್ತದೆ ಎಂದಿದೆ.

ಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...