Homeಮುಖಪುಟಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಜೂನ್ ತಿಂಗಳಿನಲ್ಲಿಯೇ ದೆಹಲಿಯ ಪರ್ವತ ಪ್ರದೇಶದಲ್ಲಿ ಅನಧಿಕೃತವಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ನನಗೆ ತಿಳಿಸಲಾಗಿದೆ ಎಂಬ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಈ ಬಗ್ಗೆ ಅವರ ಹೇಳಿಕೆಯಲ್ಲಿ ಇರುವ ದ್ವಂದ್ವ ಇರುವುದನ್ನು ಕೋರ್ಟ್ ಕಂಡುಕೊಂಡಿದೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಮರಗಳನ್ನು ಕಡಿಯಲು ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ಸುಪ್ರಿಂಕೋರ್ಟ್‌ನ ನಿರ್ದೇಶನವನ್ನು ಉಲ್ಲಂಘಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಮರಗಳನ್ನು ಕಡಿಯಲು ಅನುಮತಿ ನೀಡಿರುವುದು ಬೆಳಕಿಗೆ ಬಂದ ನಂತರ ಸಕ್ಸೇನಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿ ಕಾರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿಯಲ್ಲಿ ಮರ ಕಡಿಯುವ ಕಾರ್ಯ ನಡೆದಿತ್ತು. ಫೆಬ್ರುವರಿಯಲ್ಲಿ ಮರ ಕಡಿಯುವ ಕಾರ್ಯ ಆರಂಭವಾದ ನಂತರವೇ ಮಾರ್ಚ್‌ನಲ್ಲಿ ನ್ಯಾಯಾಲಯದ ಒಪ್ಪಿಗೆಯ ಅಗತ್ಯವಿದೆ ಎಂಬುದು ತನಗೆ ಗೊತ್ತಾಯಿತು ಎಂದು ಸಕ್ಸೇನಾ ಹೇಳಿಕೊಂಡಿದ್ದಾರೆ. ಆದರೆ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸಕ್ಸೇನಾ ಅವರು ಜೂನ್‌ ವೇಳೆ ಮರಗಳನ್ನು ಕಡಿಯುವ ಬಗ್ಗೆ ತನಗೆ ತಿಳಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಆದಾಗ್ಯೂ, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಪೀಠವು ದಾಖಲೆಯನ್ನು ಪರಿಶೀಲಿಸಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಂದಿನ ಉಪಾಧ್ಯಕ್ಷ ಸುಭಾಶಿಶ್ ಪಾಂಡಾ ಅವರು ಏಪ್ರಿಲ್ ನಲ್ಲಿಯೇ ಮರ ಕಡಿಯುವ ಬಗ್ಗೆ ಸಕ್ಸೇನಾ ಅವರಿಗೆ ಮಾಹಿತಿ ನೀಡಿದ್ದರು ಕಂಡುಕೊಂಡಿದೆ. ಅದರ ನಂತರ ಸುಭಾಶಿಶ್ ಪಾಂಡಾ ಅವರನ್ನು ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ವರ್ಗಾಯಿಸಲಾಗಿದೆ.

“ಅಫಿಡವಿಟ್‌ನಲ್ಲಿ, ಫೆಬ್ರವರಿ 16, 2024 ರ ಮೊದಲು ವಾಸ್ತವದಲ್ಲಿ ಮರ ಕಡಿಯುವಿಕೆ ನಡೆದಿದೆ ಎಂಬ ಅಂಶವನ್ನು ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ತೋರಿಸುತ್ತದೆ” ಎಂದು ನ್ಯಾಯಾಲಯವು ಗುರುವಾರ ಆದೇಶದಲ್ಲಿ ಉಲ್ಲೇಖಿಸಿದೆ. ಫೆಬ್ರುವರಿಯಲ್ಲಿ ವಾಸ್ತವವಾಗಿ ಕಡಿಯಲಾಗಿದೆ ಎಂಬ ಅಂಶ ಸಕ್ಸೇನಾ ಅವರಿಗೆ ತಿಳಿದಿದ್ದು ಜೂನ್ 10 ರಂದು ಎಂಬ ಅವರ ಹೇಳಿಕೆಯು ತಪ್ಪಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

“ಹೀಗಾಗಿ ನಾವು ಮೇಲಿನ ವ್ಯತ್ಯಾಸದ ಕುರಿತು ಡಿಡಿಎ ಉಪಾಧ್ಯಕ್ಷರಿಂದ ಹೆಚ್ಚುವರಿ ಅಫಿಡವಿಟ್‌ಗೆ ಕರೆ ನೀಡುತ್ತೇವೆ. ಎಲ್ಲಾ ಮೂಲ ದಾಖಲೆಗಳನ್ನು ಈ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಾವು ನಿರ್ದೇಶಿಸುತ್ತೇವೆ. ವಿಚಾರಣೆಯನ್ನು ಮಂಗಳವಾರ ಪಟ್ಟಿ ಮಾಡಿ… ಮರಗಳನ್ನು ಕಡಿಯುವ ಬಗ್ಗೆ ಅವರಿಗೆ ಯಾವಾಗ ತಿಳಿಯಿತು ಎಂದು ಅವರು ನಿರ್ದಿಷ್ಟ ದಿನಾಂಕವನ್ನು ಅಫಿಡವಿಟ್‌ನಲ್ಲಿ ಹೇಳಲಿ” ಕೋರ್ಟ್ ಆದೇಶಿಸಿದೆ.

ದೆಹಲಿಯ ರಿಡ್ಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯುತ್ತಿರುವ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಸುಪ್ರೀಂ ಕೋರ್ಟ್‌ನ ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ನ್ಯಾಯಾಲಯವು ಈ ಹಿಂದೆ ನಿರ್ದೇಶನ ನೀಡಿದ್ದರೂ ಸಹ, ಮರಗಳನ್ನು ಹೇಗೆ ಕತ್ತರಿಸಲಾಯಿತು ಎಂಬುದನ್ನು ವಿವರಿಸಲು ಪೀಠವು ಇತ್ತೀಚೆಗೆ ಲೆಫ್ಟಿನೆಂಟ್‌ ಸಕ್ಸೇನ್ ಅವರನ್ನು ಕೇಳಿದೆ.

ಅಕ್ಟೋಬರ್ 22 ರ ಅಫಿಡವಿಟ್‌ನಲ್ಲಿ, ಎಲ್‌ಜಿ ಸಕ್ಸೇನಾ ಅವರು ಪೂರ್ವಾನುಮತಿ ಅಗತ್ಯದ ಬಗ್ಗೆ ತನಗೆ ತಿಳಿದಿರಲಿಲ್ಲ ಮತ್ತು ತಾನು ಸಾರ್ವಜನಿಕ ಹಿತಾಸಕ್ತಿಯ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದರು. 2,200 ಕೋಟಿ ಸಾರ್ವಜನಿಕ ಹಣವನ್ನು ಈಗಾಗಲೇ ಹೂಡಿಕೆ ಮಾಡಿರುವ ಮಹತ್ವದ ಯೋಜನೆಗಾಗಿ ಮರ ಕಡಿಯುವುದಾಗಿ ಅವರು ಒತ್ತಿ ಹೇಳಿದ್ದರು.

ಇದನ್ನೂ ಓದಿ: ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...