HomeಅಂಕಣಗಳುKarnataka against SIRಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು “ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ” ನಂತೆ ಕಂಡುಬರುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಜೂನ್ 19 ರಂದು ತಿಳಿಸಿದೆ. ಈ ಮೂಲಕ 90 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕ್ರಿಯೆಯ ಮೇಲೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದೆ. ಈ ರೀತಿ ಕೈಬಿಡಲಾದವರಲ್ಲಿ 27 ಲಕ್ಷ ಜನರು ಈಗಾಗಲೇ ಚುನಾವಣೆಗಳು ಮುಗಿದಿದ್ದರೂ ಸಹ ಇನ್ನೂ ತಮ್ಮ ನ್ಯಾಯಸಮ್ಮತ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವುದರ ವಿರುದ್ಧ ವಕೀಲ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ ಎಂದು ಲೈವ್‌ಲಾ ವರದಿ ಮಾಡಿದೆ. ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ಈ ವಿಚಾರಣೆ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟಿದ್ದರಿಂದ ಇಂತಹ ಮತದಾರರು ಈ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಪರ ಹಾಜರಾದ ವಕೀಲ ಶಕೀಲ್ ಶೇಖ್, ತಮ್ಮ ಕಕ್ಷಿದಾರರು ಕಳೆದ ಐದು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ದೇಶದಲ್ಲಿ ಮತದಾನದ ಹಕ್ಕನ್ನು ಚಲಾಯಿಸುತ್ತಾ ಬಂದಿದ್ದಾರೆ. ಅವರ ಮತದಾರರ ಅರ್ಹತೆಯ ಬಗ್ಗೆ ಇದುವರೆಗೆ ಯಾವುದೇ ತನಿಖೆ ನಡೆದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೊನೆಯ ಬಾರಿ ತೀವ್ರ ಪರಿಷ್ಕರಣೆ ನಡೆದ 2002ಕ್ಕಿಂತ ಮುಂಚಿನಿಂದಲೂ ಅಲಿ ಅವರು ಕಾನೂನುಬದ್ಧ ಮತದಾರರಾಗಿದ್ದರು ಎಂದು ವಕೀ ಶೇಖ್ ವಾದಿಸಿದ್ದಾರೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಟ್ಟಿರುವುದರ ವಿರುದ್ಧ ಅಲಿ ಅವರು ಪ್ರಜಾಪ್ರತಿನಿಧಿ ಕಾಯ್ದೆ, 1950 ಅಡಿಯಲ್ಲಿ ಮಾರ್ಚ್ 27, 2026ರಂದು ಮೇಲ್ಮನವಿ ಸಲ್ಲಿಸಿದ್ದರು. ಆದಾಗ್ಯೂ, ಅವರಿಗೆ ಇದುವರೆಗೆ ಒಂದೇ ಒಂದು ಬಾರಿಯೂ ವಿಚಾರಣೆಯ ಅವಕಾಶವನ್ನು ನೀಡಿಲ್ಲ ಎಂದು ಅವರು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಈ ಮಧ್ಯೆ, ರಾಜ್ಯದ ವಿಧಾನಸಭೆ ಚುನಾವಣೆ ನಡೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದೆ. ಮುರ್ಷಿದಾಬಾದ್ ಸೇರಿದಂತೆ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಚುನಾವಣಾ ಫಲಿತಾಂಶದ ಮೇಲೆ ಪ್ರಮುಖ ಪರಿಣಾಮ ಬೀರಿದೆ ಎಂದು ‘ದಿ ವೈರ್’ ನಡೆಸಿದ ವಿಶ್ಲೇಷಣೆಗಳು ತೋರಿಸಿವೆ. ಬಂಗಾಳದ ಎಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಮುರ್ಷಿದಾಬಾದ್‌ನಲ್ಲೇ ಅತ್ಯಂತ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು, ಅರ್ಜಿದಾರರು 1977ರಿಂದ ವಕೀಲರಾಗಿ ವೃತ್ತಿ ಮಾಡುತ್ತಿದ್ದಾರೆ ಮತ್ತು ಅವರು ಇದೇ ರಾಜ್ಯದ (ಪಶ್ಚಿಮ ಬಂಗಾಳ) ನಿವಾಸಿಯಂತೆ ಕಂಡುಬರುತ್ತಿದ್ದಾರೆ ಎಂದು ಹೇಳಿದೆ. ಲೈವ್‌ಲಾ ವರದಿಯ ಪ್ರಕಾರ, “ಮೇಲ್ನೋಟಕ್ಕೆ ನೀವು ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕರಂತೆ ಕಂಡುಬರುತ್ತೀರಿ ಎಂದು ನಾವು ನಿಮ್ಮೊಂದಿಗೆ ಒಪ್ಪಿಕೊಳ್ಳುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ. ಆದಾಗ್ಯೂ, ನ್ಯಾಯಾಲಯವು ತಕ್ಷಣವೇ ಅಲಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆ ಮಾಡಿಲ್ಲ.

ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ಹೆಸರು ಕೈಬಿಡುವಿಕೆ ಪ್ರಕ್ರಿಯೆಯನ್ನು ನಿರ್ವಹಿಸಲು ರಚಿಸಲಾದ ವಿಶಾಲವಾದ ಮೇಲ್ಮನವಿ ವ್ಯವಸ್ಥೆಯನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಟ್ರಿಬ್ಯುನಲ್‌ಗಳ ಮುಂದೆ ಭಾರಿ ಸಂಖ್ಯೆಯ ಮೇಲ್ಮನವಿಗಳು ಬಾಕಿ ಉಳಿದಿವೆ ಮತ್ತು ಇದಕ್ಕಾಗಿ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಂದ ತಮಗೆ ಪತ್ರ ಬಂದಿರುವುದನ್ನು ಒಪ್ಪಿಕೊಂಡಿದ್ದಾರೆ.

ಲೈವ್‌ಲಾ ವರದಿಯ ಪ್ರಕಾರ, “ನಿಮ್ಮ ಪ್ರಕರಣದಲ್ಲಿ, ನಿಮಗೆ ಆದ್ಯತೆಯ ಮೇರೆಗೆ (out-of-turn) ವಿಚಾರಣೆ ನಡೆಸಿ, ನಿಮ್ಮ ವಿಷಯವನ್ನು ಇತ್ಯರ್ಥಪಡಿಸುವಂತೆ ಅವರಿಗೆ [ಮೇಲ್ಮನವಿ ಟ್ರಿಬ್ಯುನಲ್] ನಿರ್ದೇಶನ ನೀಡಿ ನಾವು ಆದೇಶ ಹೊರಡಿಸುತ್ತಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಅವರಿಗೆ ತಿಳಿಸಿದ್ದಾರೆ.

ಅರ್ಜಿದಾರರ ಪ್ರಕರಣವನ್ನು ನಿರ್ದಿಷ್ಟ ಸಮಯದ ಮಿತಿಯೊಳಗೆ ಇತ್ಯರ್ಥಪಡಿಸುವಂತೆ ನ್ಯಾಯಾಲಯವು ಟ್ರಿಬ್ಯುನಲ್‌ಗೆ ನಿರ್ದೇಶನ ನೀಡಿದೆ. ಬಾರ್ ಆಂಡ್ ಬೆಂಚ್ ವರದಿಯ ಪ್ರಕಾರ, “ಇಲ್ಲಿಯವರೆಗೆ ಮೇಲ್ಮನವಿಯ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ, ಈ ವಿಷಯವನ್ನು ಆದಷ್ಟು ಶೀಘ್ರವಾಗಿ ಮತ್ತು ಪ್ರಮುಖವಾಗಿ ಎರಡು ತಿಂಗಳ ಒಳಗಾಗಿ ಇತ್ಯರ್ಥಪಡಿಸುವಂತೆ ನಾವು ಮೇಲ್ಮನವಿ ಟ್ರಿಬ್ಯುನಲ್‌ಗೆ ವಿನಂತಿಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಮೇಲ್ಮನವಿ ಟ್ರಿಬ್ಯುನಲ್‌ಗಳು (ಅಪೀಲು ನ್ಯಾಯಮಂಡಳಿಗಳು) ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡಿವೆ. ಏಪ್ರಿಲ್ 2026ರಿಂದ ಈ ಟ್ರಿಬ್ಯುನಲ್‌ಗಳ ಮುಂದೆ 34 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಸಲ್ಲಿಕೆಯಾಗಿವೆ.

ನ್ಯಾಯಾಲಯದ ಮುಂದೆ ಮಂಡಿಸಲಾದ ಅಂಕಿ-ಅಂಶಗಳ ಪ್ರಕಾರ, ಜನವರಿ 2026ರ ವೇಳೆಗೆ ಎಸ್‌ಐಆರ್ ಪ್ರಕ್ರಿಯೆಯ ಮತದಾರರ ಪಟ್ಟಿ ತಯಾರಿಕೆಯ ಹಂತದಲ್ಲಿ ಹೊರಗಿಡಲಾಗಿದ್ದ 58 ಲಕ್ಷ ಹೆಸರುಗಳ ಪೈಕಿ ಸುಮಾರು 9.64 ಲಕ್ಷ ಮರುಸೇರ್ಪಡೆ ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಆದಾಗ್ಯೂ, ಫೆಬ್ರವರಿ 28, 2026ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ ಕೇವಲ 1.82 ಲಕ್ಷ ಹೆಸರುಗಳ ಸೇರ್ಪಡೆ ಮಾತ್ರ ಕಂಡುಬಂದಿದೆ.

ಮಾರ್ಚ್ 27, 2026ರಂದು ಅಗತ್ಯ ದಾಖಲೆಗಳೊಂದಿಗೆ ಮೇಲ್ಮನವಿ ಸಲ್ಲಿಸಿ ಮೂರು ತಿಂಗಳು ಕಳೆದಿದ್ದರೂ, ಇಂದಿನವರೆಗೂ ಸಾಮಾನ್ಯ ಮೇಲ್ಮನವಿ ಪ್ರಕ್ರಿಯೆಯಡಿಯಲ್ಲಿ ಅಲಿ ಅವರ ಮನವಿಗೆ ಯಾವುದೇ ಗಮನಾರ್ಹ ಫಲಿತಾಂಶ ಸಿಕ್ಕಿರಲಿಲ್ಲ ಎಂದು ಲೈವ್‌ಲಾ ವರದಿ ಹೇಳಿದೆ.





 

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...