HomeಅಂಕಣಗಳುKarnataka against SIRಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು “ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ” ನಂತೆ ಕಂಡುಬರುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಜೂನ್ 19 ರಂದು ತಿಳಿಸಿದೆ. ಈ ಮೂಲಕ 90 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕ್ರಿಯೆಯ ಮೇಲೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದೆ. ಈ ರೀತಿ ಕೈಬಿಡಲಾದವರಲ್ಲಿ 27 ಲಕ್ಷ ಜನರು ಈಗಾಗಲೇ ಚುನಾವಣೆಗಳು ಮುಗಿದಿದ್ದರೂ ಸಹ ಇನ್ನೂ ತಮ್ಮ ನ್ಯಾಯಸಮ್ಮತ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವುದರ ವಿರುದ್ಧ ವಕೀಲ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ ಎಂದು ಲೈವ್‌ಲಾ ವರದಿ ಮಾಡಿದೆ. ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ಈ ವಿಚಾರಣೆ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟಿದ್ದರಿಂದ ಇಂತಹ ಮತದಾರರು ಈ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಪರ ಹಾಜರಾದ ವಕೀಲ ಶಕೀಲ್ ಶೇಖ್, ತಮ್ಮ ಕಕ್ಷಿದಾರರು ಕಳೆದ ಐದು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ದೇಶದಲ್ಲಿ ಮತದಾನದ ಹಕ್ಕನ್ನು ಚಲಾಯಿಸುತ್ತಾ ಬಂದಿದ್ದಾರೆ. ಅವರ ಮತದಾರರ ಅರ್ಹತೆಯ ಬಗ್ಗೆ ಇದುವರೆಗೆ ಯಾವುದೇ ತನಿಖೆ ನಡೆದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೊನೆಯ ಬಾರಿ ತೀವ್ರ ಪರಿಷ್ಕರಣೆ ನಡೆದ 2002ಕ್ಕಿಂತ ಮುಂಚಿನಿಂದಲೂ ಅಲಿ ಅವರು ಕಾನೂನುಬದ್ಧ ಮತದಾರರಾಗಿದ್ದರು ಎಂದು ವಕೀ ಶೇಖ್ ವಾದಿಸಿದ್ದಾರೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಟ್ಟಿರುವುದರ ವಿರುದ್ಧ ಅಲಿ ಅವರು ಪ್ರಜಾಪ್ರತಿನಿಧಿ ಕಾಯ್ದೆ, 1950 ಅಡಿಯಲ್ಲಿ ಮಾರ್ಚ್ 27, 2026ರಂದು ಮೇಲ್ಮನವಿ ಸಲ್ಲಿಸಿದ್ದರು. ಆದಾಗ್ಯೂ, ಅವರಿಗೆ ಇದುವರೆಗೆ ಒಂದೇ ಒಂದು ಬಾರಿಯೂ ವಿಚಾರಣೆಯ ಅವಕಾಶವನ್ನು ನೀಡಿಲ್ಲ ಎಂದು ಅವರು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಈ ಮಧ್ಯೆ, ರಾಜ್ಯದ ವಿಧಾನಸಭೆ ಚುನಾವಣೆ ನಡೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದೆ. ಮುರ್ಷಿದಾಬಾದ್ ಸೇರಿದಂತೆ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಚುನಾವಣಾ ಫಲಿತಾಂಶದ ಮೇಲೆ ಪ್ರಮುಖ ಪರಿಣಾಮ ಬೀರಿದೆ ಎಂದು ‘ದಿ ವೈರ್’ ನಡೆಸಿದ ವಿಶ್ಲೇಷಣೆಗಳು ತೋರಿಸಿವೆ. ಬಂಗಾಳದ ಎಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಮುರ್ಷಿದಾಬಾದ್‌ನಲ್ಲೇ ಅತ್ಯಂತ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು, ಅರ್ಜಿದಾರರು 1977ರಿಂದ ವಕೀಲರಾಗಿ ವೃತ್ತಿ ಮಾಡುತ್ತಿದ್ದಾರೆ ಮತ್ತು ಅವರು ಇದೇ ರಾಜ್ಯದ (ಪಶ್ಚಿಮ ಬಂಗಾಳ) ನಿವಾಸಿಯಂತೆ ಕಂಡುಬರುತ್ತಿದ್ದಾರೆ ಎಂದು ಹೇಳಿದೆ. ಲೈವ್‌ಲಾ ವರದಿಯ ಪ್ರಕಾರ, “ಮೇಲ್ನೋಟಕ್ಕೆ ನೀವು ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕರಂತೆ ಕಂಡುಬರುತ್ತೀರಿ ಎಂದು ನಾವು ನಿಮ್ಮೊಂದಿಗೆ ಒಪ್ಪಿಕೊಳ್ಳುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ. ಆದಾಗ್ಯೂ, ನ್ಯಾಯಾಲಯವು ತಕ್ಷಣವೇ ಅಲಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆ ಮಾಡಿಲ್ಲ.

ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ಹೆಸರು ಕೈಬಿಡುವಿಕೆ ಪ್ರಕ್ರಿಯೆಯನ್ನು ನಿರ್ವಹಿಸಲು ರಚಿಸಲಾದ ವಿಶಾಲವಾದ ಮೇಲ್ಮನವಿ ವ್ಯವಸ್ಥೆಯನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಟ್ರಿಬ್ಯುನಲ್‌ಗಳ ಮುಂದೆ ಭಾರಿ ಸಂಖ್ಯೆಯ ಮೇಲ್ಮನವಿಗಳು ಬಾಕಿ ಉಳಿದಿವೆ ಮತ್ತು ಇದಕ್ಕಾಗಿ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಂದ ತಮಗೆ ಪತ್ರ ಬಂದಿರುವುದನ್ನು ಒಪ್ಪಿಕೊಂಡಿದ್ದಾರೆ.

ಲೈವ್‌ಲಾ ವರದಿಯ ಪ್ರಕಾರ, “ನಿಮ್ಮ ಪ್ರಕರಣದಲ್ಲಿ, ನಿಮಗೆ ಆದ್ಯತೆಯ ಮೇರೆಗೆ (out-of-turn) ವಿಚಾರಣೆ ನಡೆಸಿ, ನಿಮ್ಮ ವಿಷಯವನ್ನು ಇತ್ಯರ್ಥಪಡಿಸುವಂತೆ ಅವರಿಗೆ [ಮೇಲ್ಮನವಿ ಟ್ರಿಬ್ಯುನಲ್] ನಿರ್ದೇಶನ ನೀಡಿ ನಾವು ಆದೇಶ ಹೊರಡಿಸುತ್ತಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಅವರಿಗೆ ತಿಳಿಸಿದ್ದಾರೆ.

ಅರ್ಜಿದಾರರ ಪ್ರಕರಣವನ್ನು ನಿರ್ದಿಷ್ಟ ಸಮಯದ ಮಿತಿಯೊಳಗೆ ಇತ್ಯರ್ಥಪಡಿಸುವಂತೆ ನ್ಯಾಯಾಲಯವು ಟ್ರಿಬ್ಯುನಲ್‌ಗೆ ನಿರ್ದೇಶನ ನೀಡಿದೆ. ಬಾರ್ ಆಂಡ್ ಬೆಂಚ್ ವರದಿಯ ಪ್ರಕಾರ, “ಇಲ್ಲಿಯವರೆಗೆ ಮೇಲ್ಮನವಿಯ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ, ಈ ವಿಷಯವನ್ನು ಆದಷ್ಟು ಶೀಘ್ರವಾಗಿ ಮತ್ತು ಪ್ರಮುಖವಾಗಿ ಎರಡು ತಿಂಗಳ ಒಳಗಾಗಿ ಇತ್ಯರ್ಥಪಡಿಸುವಂತೆ ನಾವು ಮೇಲ್ಮನವಿ ಟ್ರಿಬ್ಯುನಲ್‌ಗೆ ವಿನಂತಿಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಮೇಲ್ಮನವಿ ಟ್ರಿಬ್ಯುನಲ್‌ಗಳು (ಅಪೀಲು ನ್ಯಾಯಮಂಡಳಿಗಳು) ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡಿವೆ. ಏಪ್ರಿಲ್ 2026ರಿಂದ ಈ ಟ್ರಿಬ್ಯುನಲ್‌ಗಳ ಮುಂದೆ 34 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಸಲ್ಲಿಕೆಯಾಗಿವೆ.

ನ್ಯಾಯಾಲಯದ ಮುಂದೆ ಮಂಡಿಸಲಾದ ಅಂಕಿ-ಅಂಶಗಳ ಪ್ರಕಾರ, ಜನವರಿ 2026ರ ವೇಳೆಗೆ ಎಸ್‌ಐಆರ್ ಪ್ರಕ್ರಿಯೆಯ ಮತದಾರರ ಪಟ್ಟಿ ತಯಾರಿಕೆಯ ಹಂತದಲ್ಲಿ ಹೊರಗಿಡಲಾಗಿದ್ದ 58 ಲಕ್ಷ ಹೆಸರುಗಳ ಪೈಕಿ ಸುಮಾರು 9.64 ಲಕ್ಷ ಮರುಸೇರ್ಪಡೆ ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಆದಾಗ್ಯೂ, ಫೆಬ್ರವರಿ 28, 2026ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ ಕೇವಲ 1.82 ಲಕ್ಷ ಹೆಸರುಗಳ ಸೇರ್ಪಡೆ ಮಾತ್ರ ಕಂಡುಬಂದಿದೆ.

ಮಾರ್ಚ್ 27, 2026ರಂದು ಅಗತ್ಯ ದಾಖಲೆಗಳೊಂದಿಗೆ ಮೇಲ್ಮನವಿ ಸಲ್ಲಿಸಿ ಮೂರು ತಿಂಗಳು ಕಳೆದಿದ್ದರೂ, ಇಂದಿನವರೆಗೂ ಸಾಮಾನ್ಯ ಮೇಲ್ಮನವಿ ಪ್ರಕ್ರಿಯೆಯಡಿಯಲ್ಲಿ ಅಲಿ ಅವರ ಮನವಿಗೆ ಯಾವುದೇ ಗಮನಾರ್ಹ ಫಲಿತಾಂಶ ಸಿಕ್ಕಿರಲಿಲ್ಲ ಎಂದು ಲೈವ್‌ಲಾ ವರದಿ ಹೇಳಿದೆ.





 

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...