HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...