HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...