HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....