HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...