HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...